Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂರು ರಾಜ್ಯಗಳ ರೈತರು ಖುಷಿ ಪಡೋ ಸುದ್ದಿ : ಮತ್ತೆ ಭರ್ತಿಯಾಯ್ತು ತುಂಗಾ ಭದ್ರಾ ನದಿ

---Advertisement---

 

 

ಬಳ್ಳಾರಿ: ಗೇಟ್ ಮುರಿದು ಬಿದ್ದು ತುಂಗಾ ಭದ್ರಾ ನದಿಯಲ್ಲಿದ್ದ ನೀರು ಅನಿವಾರ್ಯವಾಗಿ ಹೊರಗೆ ಬಿಡಲೇಬೇಕಾಗಿತ್ತು. ತುಂಗಾಭದ್ರಾ ನದಿ ನೀರಿನಿಂದ ಮೂರು ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಗೇಟ್ ಸರಿಯಾದ ಮೇಲೆ ನೀರಿನ ಬಗ್ಗೆಯೇ ರೈತರಿಗೆ ಚಿಂತೆಯಾಗಿತ್ತು. ಇದೀಗ ಆ ಚಿಂತೆ ಕಳೆದಿದೆ, ನೀರು ಮತ್ತೆ ಭರ್ತಿಯಾಗಿದೆ.

ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾದರೆ ತುಂಗಾಭದ್ರಾ ಡ್ಯಾಂ ತುಂಬುವ ನಿರೀಕ್ಷೆ ಇತ್ತು. ಅದರಂತೆ ಗೇಟ್ ರಿಪೇರಿ ಕಾರ್ಯದ ಬಳಿಕ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗಿದೆ. ಹೀಗಾಗಿ ನಿರೀಕ್ಷೆಗೂ ಮೀರಿ ಬಹಳ ಬೇಗನೇ ತುಂಗಾಭದ್ರಾ ಡ್ಯಾಂ ಭರ್ತಿಯಾಗಿದೆ. ಇದರಿಂದ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರ ಮೊಗದಲ್ಲಿ ಸಂತಸವೂ ಹೆಚ್ಚಾಗಿದೆ.

‘ಎಲ್ಲರ ಪ್ರಾರ್ಥನೆಯಿಂದ, ವರುಣನ ಕೃಪೆಯಿಂದ ತುಂಗಾಭದ್ರಾ ಡ್ಯಾಂ ಮತ್ತೆ ತುಂಬಿದೆ. ಹೆಚ್ಚುವರಿ ನೀರನ್ನು ನದಿಗೆ ಕ್ರೈಸ್ಟ್ ಗೇಟ್ ಮುಖಾಂತರ ಬಿಡಲಾಗುವುದು’ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. ತುಂಗಾ ಭದ್ರಾ ಜಲಾಶಯದಲ್ಲಿ 90 ಟಿಎಂಸಿ ನೀರು ಜಾಸ್ತಿಯಾದಾಗಲೇ ಭರ್ತಿಯಾಗುವ ಮುನ್ಸೂಚನೆ ಸಿಕ್ಕಿತ್ತು. ಆದರೆ ಗೇಟ್ ಕಿತ್ತುಕೊಂಡು ಬಿಟ್ಟಿತ್ತು. ದುರಸ್ತಿ ಕಾರ್ಯ ನಡೆಯುವಾಗಲೇ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ನೀರು ತುಂಬುತ್ತೆ ಎಂಬ ಭರವಸೆಯನ್ನು ನೀಡಿದ್ದರು. ಇದೀಗ ಅದು ಸತ್ಯವಾಗಿದೆ. ತುಂಗಾಭದ್ರಾ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ: 1631.92 ಅಡಿ ಇದೆ. ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ : 105.788 ಟಿಎಂಸಿಯನ್ನು ಹೊಂದಿದೆ. ಕಳೆದ 24 ಗಂಟೆಯ ಒಳಹರಿವು ಸರಾಸರಿ : 39945 ಕ್ಯುಸೆಕ್ ಆಗಿದೆ. ಇನ್ನು ಕಳೆದ 24 ಗಂಟೆಯ ಹೊರ ಹರಿವು : 15235 ಕ್ಯುಸೆಕ್ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...