Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂರು ರಾಜ್ಯಗಳ ರೈತರು ಖುಷಿ ಪಡೋ ಸುದ್ದಿ : ಮತ್ತೆ ಭರ್ತಿಯಾಯ್ತು ತುಂಗಾ ಭದ್ರಾ ನದಿ

Facebook
Twitter
Telegram
WhatsApp

ಬಳ್ಳಾರಿ: ಗೇಟ್ ಮುರಿದು ಬಿದ್ದು ತುಂಗಾ ಭದ್ರಾ ನದಿಯಲ್ಲಿದ್ದ ನೀರು ಅನಿವಾರ್ಯವಾಗಿ ಹೊರಗೆ ಬಿಡಲೇಬೇಕಾಗಿತ್ತು. ತುಂಗಾಭದ್ರಾ ನದಿ ನೀರಿನಿಂದ ಮೂರು ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಗೇಟ್ ಸರಿಯಾದ ಮೇಲೆ ನೀರಿನ ಬಗ್ಗೆಯೇ ರೈತರಿಗೆ ಚಿಂತೆಯಾಗಿತ್ತು. ಇದೀಗ ಆ ಚಿಂತೆ ಕಳೆದಿದೆ, ನೀರು ಮತ್ತೆ ಭರ್ತಿಯಾಗಿದೆ.

ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾದರೆ ತುಂಗಾಭದ್ರಾ ಡ್ಯಾಂ ತುಂಬುವ ನಿರೀಕ್ಷೆ ಇತ್ತು. ಅದರಂತೆ ಗೇಟ್ ರಿಪೇರಿ ಕಾರ್ಯದ ಬಳಿಕ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗಿದೆ. ಹೀಗಾಗಿ ನಿರೀಕ್ಷೆಗೂ ಮೀರಿ ಬಹಳ ಬೇಗನೇ ತುಂಗಾಭದ್ರಾ ಡ್ಯಾಂ ಭರ್ತಿಯಾಗಿದೆ. ಇದರಿಂದ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರ ಮೊಗದಲ್ಲಿ ಸಂತಸವೂ ಹೆಚ್ಚಾಗಿದೆ.

‘ಎಲ್ಲರ ಪ್ರಾರ್ಥನೆಯಿಂದ, ವರುಣನ ಕೃಪೆಯಿಂದ ತುಂಗಾಭದ್ರಾ ಡ್ಯಾಂ ಮತ್ತೆ ತುಂಬಿದೆ. ಹೆಚ್ಚುವರಿ ನೀರನ್ನು ನದಿಗೆ ಕ್ರೈಸ್ಟ್ ಗೇಟ್ ಮುಖಾಂತರ ಬಿಡಲಾಗುವುದು’ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. ತುಂಗಾ ಭದ್ರಾ ಜಲಾಶಯದಲ್ಲಿ 90 ಟಿಎಂಸಿ ನೀರು ಜಾಸ್ತಿಯಾದಾಗಲೇ ಭರ್ತಿಯಾಗುವ ಮುನ್ಸೂಚನೆ ಸಿಕ್ಕಿತ್ತು. ಆದರೆ ಗೇಟ್ ಕಿತ್ತುಕೊಂಡು ಬಿಟ್ಟಿತ್ತು. ದುರಸ್ತಿ ಕಾರ್ಯ ನಡೆಯುವಾಗಲೇ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ನೀರು ತುಂಬುತ್ತೆ ಎಂಬ ಭರವಸೆಯನ್ನು ನೀಡಿದ್ದರು. ಇದೀಗ ಅದು ಸತ್ಯವಾಗಿದೆ. ತುಂಗಾಭದ್ರಾ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ: 1631.92 ಅಡಿ ಇದೆ. ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ : 105.788 ಟಿಎಂಸಿಯನ್ನು ಹೊಂದಿದೆ. ಕಳೆದ 24 ಗಂಟೆಯ ಒಳಹರಿವು ಸರಾಸರಿ : 39945 ಕ್ಯುಸೆಕ್ ಆಗಿದೆ. ಇನ್ನು ಕಳೆದ 24 ಗಂಟೆಯ ಹೊರ ಹರಿವು : 15235 ಕ್ಯುಸೆಕ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!