Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಡಿವೈಎಸ್ಪಿ ಚೈತ್ರಾ ವಿರುದ್ಧ ರೈತ ಸಂಘಟನೆ ದೂರು..!

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಹಿರಿಯೂರು ಡಿವೈಎಸ್ಪಿ ಚೈತ್ರಾ ಅವರ ವಿರುದ್ಧ ಚಿತ್ರದುರ್ಗದಲ್ಲಿ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾಗೆ ರೈತರೆಲ್ಲಾ ಸೇರಿ ದೂರು ನೀಡಿದ್ದಾರೆ.

ಬುಧವಾರದಂದು (ಜುಲೈ. 31) ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯತ್ರಿ ಡ್ಯಾಂ ಸೇರಿದಂತೆ 18 ಕೆರೆಗಳಿಗೆ ‌ವಾಣಿ ವಿಲಾಸ ಜಲಾಶಯದಿಂದ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜೆಜೆ ಹಳ್ಳಿ ಹೋಬಳಿಯಿಂದ ತಾಲೂಕ ಕಚೇರಿವರೆಗೂ ಸಾವಿರಾರು ರೈತರು ನೂರಾರು ಟ್ಯಾಕ್ಟರ್, ಆಟೋ, ಕಾರು, ಬೈಕ್ ಗಳೊಂದಿಗೆ ಪಾದಯಾತ್ರೆ ಮೂಲಕ ಬಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ವೇಳೆ ಡಿವೈಎಸ್ಪಿ ಚೈತ್ರಾ ಅವರು ರೈತರ ವಿರುದ್ಧ ದರ್ಪ ತೋರಿದ್ದರು ಎಂದು ದೂರು ನೀಡಲಾಗಿದ್ದು, ಚಳುವಳಿ ವೇಳೆ ರೈತರ ಬಗ್ಗೆ ಕೀಳಾಗಿ ಮಾತಾಡಿ ಆವಾಜ್ ಹಾಕಿದ ಆರೋಪ ಕೇಳಿ ಬಂದಿದೆ. ರೈತ ಮುಖಂಡರಿಗೆ ಡಿವೈಎಸ್ಪಿ ಚೈತ್ರಾ ಅವಾಜ್ ವಿಡಿಯೋ ವೈರಲ್ ಆಗಿದ್ದಂತ ವಿಡಿಯೋ ಕೂಡ ಈಗ ಎಲ್ಲೆಡೆ ವೈರಲ್ ಆಗಿದೆ.

ಚಿತ್ರದುರ್ಗದಲ್ಲಿ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾಗೆ ದೂರು ನೀಡಿರುವ ರೈತ ಮುಖಂಡರು, ವಿಡಿಯೋ ಸಾಕ್ಷಿಯನ್ನು ನೀಡಿದ್ದಾರೆ. ಡಿವೈಎಸ್ಪಿ ಎಸ್ ಚೈತ್ರಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಚಳುವಳಿ ವೇಳೆ ಈ ರೀತಿ ನಿಂದಿಸಿದ್ದು ತಪ್ಪು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಹಿರಿಯೂರು ಭಾಗದಲ್ಲಿ ನಿತ್ಯ ಕೊಲೆ,‌ ಸುಲಿಗೆ, ಕಳ್ಳತನ ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಡಿವೈಎಸ್ಪಿ ವಿಫಲರಾಗಿದ್ದಾರೆ. ಆದರೆ ರೈತರ ಚಳುವಳಿ ಹತ್ತಿಕ್ಕುವ ಕೆಲಸ ಮಾಡಿದ್ದಾರೆಂದು ಆರೋಪಿಸಿ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಸಿದ್ಧವೀರಪ್ಪ, ಚಿತ್ರದುರ್ಗ ಜಿಲ್ಲಾದ್ಯಕ್ಷ ಮಲ್ಲಿಕಾರ್ಜುನ, ಹಿರಿಯೂರು ತಾಲೂಕು ಅದ್ಯಕ್ಷ ತಿಪ್ಪೇಸ್ವಾಮಿ ನೇತೃತ್ವದಲ್ಲಿ ದೂರು ನೀಡಿದ್ದಾರೆ. ಜೊತೆಗೆ ಡಿವೈಎಸ್ಪಿ ಚೈತ್ರಾ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...