ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ಗೃಹ/ವಾಣಿಜ್ಯ ಬಳಕೆಯ ವಿದ್ಯುತ್ಗೆ ವಿಧಿಸುವ ಕನಿಷ್ಠ ಚಾರ್ಜ್ನ್ನು ಸಂಪೂರ್ಣವಾಗಿ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ರೈತ ಸಂಘಗಳ ಸಮನ್ವಯ ಮತ್ತು ಅನುಷ್ಠಾನ ಸಮಿತಿ ವತಿಯಿಂದ ಒನಕೆ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಎ.ಪಿ.ಎಂ.ಸಿ.ಯಿಂದ ಮೆರವಣಿಗೆ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ನೂರಾರು ರೈತರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಧಿಕ್ಕಾರಗಳನ್ನು ಕೂಗಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ ನೆರೆಯ ರಾಜ್ಯಗಳಾದ ಕೇರಳ ಮತ್ತು ಆಂಧ್ರಗಳಲ್ಲಿ ಕೇವಲ 900 ರೂ.ಗಳಿಗೆ ಸ್ಮಾರ್ಟ್ ಸಿಗುತ್ತದೆ. ಅದೆ ನಮ್ಮ ರಾಜ್ಯದಲ್ಲಿ ಹತ್ತು ಸಾವಿರ ರೂ.ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಹೊರಟಿರುವುದು ಯಾವ ಪುರುಷಾರ್ಥಕ್ಕಾಗಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಜನರ ತೆರಿಗೆ ಹಣದಲ್ಲಿ ದುಬಾರಿ ಸ್ಮಾರ್ಟ್ ಮೀಟರ್ ಖರೀಧಿಸುವ ಅವಶ್ಯಕತೆಯೇನಿತ್ತು ಎಂದು ಪ್ರಶ್ನಿಸಿದರು?
2003 ರಿಂದ ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಲೆ ಬರುತ್ತಿವೆ. ತುಮಕೂರು, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗಳು ಅಭಿವೃದ್ದಿಯಾಗಿವೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳು ಕಳೆದಿದ್ದರೂ ಚಿತ್ರದುರ್ಗ ಜಿಲ್ಲೆ ಇನ್ನು ಬರಗಾಲದಿಂದ ಹೊರಬರಲು ಆಗಿಲ್ಲ. ಸುಸ್ಥಿತಿಯಲ್ಲಿರುವ ಮೀಟರ್ಗಳನ್ನು ಬಳಸಿ ಸ್ಮಾರ್ಟ್ ಮೀಟರ್ಗಳನ್ನು ಅಳವಡಿಸಿ ರೈತರನ್ನು ಆರ್ಥಿಕವಾಗಿ ದಿವಾಳಿಯನ್ನಾಗಿಸುವ ಕುತಂತ್ರ ನಡೆಸುತ್ತಿದೆ. ನಿಮ್ಮ ನಿಮ್ಮ ಹಳ್ಳಿಗಳಲ್ಲಿ ಸ್ಮಾರ್ಟ್ ಮೀಟರ್ಗಳನ್ನು ಅಳವಡಿಸಲು ಬಿಡಬೇಡಿ. ಒಂದೊಮ್ಮೆ ಹಾಕಿದ್ದರೆ ಕಿತ್ತು ತನ್ನಿ. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಹಿಂದಿರುಗಿಸೋಣ ಎಂದು ರೈತರನ್ನು ಜಾಗೃತಿಗೊಳಿಸಿದರು.
ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ 45 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಪ್ರಕೃತಿ ವಿಕೋಪವಾದರೂ ಕೃಷಿಯನ್ನು ನಿಲ್ಲಿಸಿಲ್ಲ. ದೇಶಕ್ಕೆ ಅನ್ನ ನೀಡುತ್ತಿರುವ ರೈತರ ಜಮೀನುಗಳನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ನೀಡಲು ಹೊರಟಿರುವ ರಾಜ್ಯ ಸರ್ಕಾರ ಅವೈಜ್ಞಾನಿಕ ಕಾನೂನುಗಳನ್ನು ಜಾರಿಗೆ ತರುತ್ತಿದೆ. ನೀರು, ವಿದ್ಯುತ್, ಬೆಂಬಲ ಬೆಲೆ ಕೇಳುತ್ತಿದ್ದೇವೆ. ಸ್ವಾಮಿನಾಥನ್ ವರದಿ ಜಾರಿಯಾಗುವತನಕ ಹೊಸ ಕಾಯಿದೆಗಳನ್ನು ಜಾರಿಗೆ ತರಬಾರದು. ಇಂಧನ ಹೊಂದಾಣಿಕೆ ಶುಲ್ಕವೆಂದು ಪ್ರತಿ ಯೂನಿಟ್ಗೆ 36 ಪೈಸೆ ವಿಧಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.
ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಕಾಂಗ್ರೆಸ್ ಸರ್ಕಾರ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ರೈತರ ತಲೆ ಮೇಲೆ ಕಲ್ಲು ಹಾಕಿದೆ. ಸ್ಮಾರ್ಟ್ ಮೀಟರ್ ಅಳವಡಿಕೆಯಿಂದ ರೈತರ ಬದುಕು ನಾಶವಾಗುತ್ತಿದೆ. ಯಾವುದೇ ಕಾರಣಕ್ಕೂ ಸ್ಮಾರ್ಟ್ ಮೀಟರ್ ಅಳವಡಿಸಲು ಬಿಡಲ್ಲ. ಹಠ ಬಿಡದೆ ಹಾಕಿದರೆ ಸುಟ್ಟು ಹಾಕುತ್ತೇವೆಂದು ಎಚ್ಚರಿಕೆ ನೀಡಿದರು.
ರೈತ ಮುಖಂಡ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ ಒಂದು ಸ್ಮಾರ್ಟ್ ಮೀಟರ್ಗೆ ಹತ್ತು ಸಾವಿರ ರೂ. ನೀಡಿ ರಾಜ್ಯ ಸರ್ಕಾರ ಖರೀಧಿಸಲು ಹೊರಟಿದೆ. ದೊಡ್ಡ ಮಟ್ಟದಲ್ಲಿ ಲೂಟಿ ಹೊಡೆಯುವ ಹುನ್ನಾರವಿದು. ಕೂಡಲೆ ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಸ್ಮಾರ್ಟ್ ಮೀಟರ್ ಅಳವಡಿಸಲು ಅವಕಾಶ ಕೊಡುವುದಿಲ್ಲ. ಮಿನಿಮಮ್ ಚಾರ್ಜ್ ನಿಲ್ಲಿಸದಿದ್ದಲ್ಲಿ ಅದಕ್ಕೆ ಅನುಗುಣವಾಗಿ ಮಿನಿಮಮ್ ಯೂನಿಟ್ ವಿದ್ಯುತ್ನ್ನು ಉಚಿತವಾಗಿ ಪೂರೈಸಬೇಕೆಂದು ಆಗ್ರಹಿಸಿದರು.
ಬಸ್ತಿಹಳ್ಳಿ ಜಿ.ಸುರೇಶ್ಬಾಬು ಮಾತನಾಡುತ್ತ ಪ್ರತಿ ಹಳ್ಳಿಗಳಲ್ಲಿ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಸಲು ಹೊರಟಿರುವುದನ್ನು ನಿಲ್ಲಿಸಬೇಕಾಗಿರುವುದರಿಂದ ಮೊದಲು ರೈತರು ಒಗ್ಗಟ್ಟಾಗಬೇಕೆಂದು ಮನವಿ ಮಾಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಎಸ್.ಕೆ.ಕುಮಾರಸ್ವಾಮಿ, ಮೇಟಿಕುರ್ಕೆ ತಿಪ್ಪೇಸ್ವಾಮಿ, ಬಿ.ಎಸ್.ರಂಗಸ್ವಾಮಿ, ಹೆಚ್.ಪ್ರಸನ್ನ, ಎಸ್.ಮಂಜುನಾಥ, ಕೆ.ರಾಜಪ್ಪ, ಎಸ್.ಗೋಪಾಲಪ್ಪ, ಜೆ.ತಿಮ್ಮಪ್ಪ, ಸಿದ್ದರಾಜು, ಆರ್.ಬಿ.ಲೋಕೇಶ್, ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷೆ ಶಾಂತಮ್ಮ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್