ಸುದ್ದಿಒನ್, ಚಳ್ಳಕೆರೆ, (ಅ.19) : ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಈ ವರ್ಷ ಸಾಕಷ್ಟು ಬೆಳೆ ಹಾನಿಯಾಗಿದ್ದು, ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇರುವ ಅಲ್ಪ,ಸ್ವಲ್ಪ ಬೆಳೆಯು ನೆಲಕಚ್ಚುವ ಸಂಭವವಿದೆ. ಅತಿವೃಷ್ಠಿ ಪ್ರದೇಶವೆಂದು ಘೋಷಿಸಿ, ಸೂಕ್ತ ಪರಿಹಾರ ನೀಡಲು ಶೇಂಗಾ ಬೆಳೆಗಾರರು ಅಧಿಕಾರಿಗಳಿಗೆ ಮನವಿ ಮಾಡಿದರು.
ತಾಲ್ಲೂಕಿನ ತಳುಕು ಹೋಬಳಿ ಕಾಲುವೇಹಳ್ಳಿ ಗ್ರಾಮ ಪಂಚಾಯತಿಯ ಕ್ಯಾತಗೊಂಡನಹಳ್ಳಿ ಮತ್ತು ಯಾದಲಗಟ್ಟೆ ಗ್ರಾಮಗಳಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ ಶೇಂಗಾ ಬೆಳೆಯ ಸಮೀಕ್ಷೆಯನ್ನು ರೈತರ ಸಮ್ಮುಖದಲ್ಲಿ ಯುನಿವರ್ಸಲ್ ಸೋಂಪೋ ಜನರಲ್ ಇನ್ಶೂರೆನ್ಸ್ ಕಂಪನಿಯ ಜಿಲ್ಲಾ ಸಂಯೋಜನಾಧಿಕಾರಿ ಬಾಲರಾಜ್, ಸಹಾಯಕ ಕೃಷಿ ಅಧಿಕಾರಿ ಜೀವನ್, ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂಧರ್ಭದಲ್ಲಿ ಕಾಲುವೇಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸೊಪ್ಪಿನ ಆರ್ ಪಾಲಯ್ಯ, ಯುನಿವರ್ಸಲ್ ಸೋಂಪೋ ಜನರಲ್ ಇನ್ಶೂರೆನ್ಸ್ ಕಂಪನಿ ಜಿಲ್ಲಾ ಸಂಯೋಜನಾಧಿಕಾರಿ ಬಾಲರಾಜ್ ಹಾಗೂ ಸಹಾಯಕ ಕೃಷಿ ಅಧಿಕಾರಿ ಜೀವನ್, ಗ್ರಾಮ ಲೆಕ್ಕಾಧಿಕಾರಿ ಸಿದ್ದೇಶ್ ಕೆ ಟಿ, ಗ್ರಾಮ ಪಂಚಾಯತಿ ಸದಸ್ಯರಾದ ಜಂಪಣ್ಣ, ಮುಕ್ಕಣ್ಣ, ತ್ರಿವೇಣಿ ರಾಮಕುಮಾರ್, ಗಂಗಮ್ಮ, ಗ್ರಾಮದ ಮುಖಂಡರಾದ ರವಿಕುಮಾರ್ ಓ, ಮಂಜುನಾಥ ಜಿ ಸಿ, ಪುಟಣ್ಣ, ಈರಣ್ಣ ಚಂದ್ರಣ್ಣ ಮೂರ್ತಪ್ಪ , ಇನ್ನು ಮುಂತಾದವರು ಇದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…