Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿದ್ಯುತ್ ಕೊರತೆ ನೀಗಿಸುವಂತೆ ಆಗ್ರಹಿಸಿ ರೈತರಿಂದ ಜೆಸ್ಕಾಂ ಸಿಬ್ಬಂದಿಗೆ ದಿಗ್ಭಂಧನ…!

---Advertisement---

 

ಕುರುಗೋಡು. ಆ.26

ಸಮೀಪದ ಸಿರಿಗೇರಿ ಮತ್ತು ಗೆಣಿಕೆಹಾಳ್ ಭಾಗದ ಸೇರಿದಂತೆ ಸುಮಾರು ಹತ್ತಾರು ಹಳ್ಳಿಯ ರೈತರು ಶನಿವಾರ ಕ್ಯಾದಿಗೆಹಾಳ್ ಕ್ರಾಸ್‌ನಲ್ಲಿ ಕೆಇಬಿ ಅಧಿಕಾರಿಗಳಿಗೆ ದಿಗ್ಭಂಧನ ಹಾಕಿದರು.

ಇದೆ ವೇಳೆ ಮಾತನಾಡಿದ ರೈತರು, ಕಳೆದ ಒಂದು ವಾರದಿಂದ ವಿದ್ಯುತ್ ಸಮಸ್ಯೆ ರೈತರನ್ನು ಕಾಡುತ್ತಿದ್ದು ಬೆಳೆ ಒಣಗಿ ಹೋಗಿವೆ. ಈಗಾಗಲೇ ಮಳೆ ಇಲ್ಲದ ಕಾರಣ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿದ ರೈತರ ಗತಿ ಏನು?ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಜೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರನ್ನು ತಡೆಗಟ್ಟಿ ಕೆಲಕಾಲ ದಿಗ್ಭಂಧನ ಹಾಕಿ ತಡೆಗಟ್ಟಿದರು.

ಸ್ಥಳಕ್ಕೆ ಆಗಮಿಸಿದ್ದ ಜೆಸ್ಕಾಂ ವಿಭಾಗ ನಿಯಂತ್ರಣ ಅಧಿಕಾರಿ ಶೇಕ್ಷಾವಲಿ ಕೂಡಲೇ ವಿದ್ಯುತ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಆದರೂ ಪಟ್ಟು ಬಿಡದ ರೈತರು ಇದು ತಾತ್ಕಾಲಿಕವಾಗಬಾರದು. ನಿರಂತರವಾಗಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಒದಗಿಸದಿದ್ದಲ್ಲಿ ಸಿರಿಗೇರಿ, ಕ್ಯಾದಿಗೆಹಾಳು, ಕೊಂಚಿಗೇರಿ, ಗೆಣಿಕೆಹಾಳು,ದಾಸಾಪುರ ಸೇರಿದಂತೆ ಸುಮಾರು ಹತ್ತಾರು ಹಳ್ಳಿಗಳ ರೈತರು ಕುರುಗೋಡು ಹಾಗೂ ಸಿರಿಗೇರಿ ಕ್ರಾಸ್‌ನ ಕೆಇಬಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದೆಂದು ಎಚ್ಚರಿಸಿದರು. ತದ ನಂತರ ಹೋರಾಟ ಹಿಂಪಡೆದುಕೊಂಡರು.

ಈ ಸಂಧರ್ಭದಲ್ಲಿ ಕ್ಯಾದಿಗೆಹಾಳಿನ ಮಾಜಿ ಗ್ರಾಪಂ ಅಧ್ಯಕ್ಷ ಶೇಖರ್,ರೈತ ಮುಖಂಡ ಮಾಸ್ತಿ ಪ್ರಕಾಶ್, ರಾಘವೇಂದ್ರ, ಗೋಪಾಲ ಕೃಷ್ಣ, ರಾರಾವಿ ವೆಂಕಟೇಶ, ಬಕಾಡೆ ಕೊಮಾರೆಪ್ಪ, ಬಿ.ದೊಡ್ಡಬಸಪ್ಪ, ಮಾಸ್ತಿ ದಾನಪ್ಪ, ದಾಸಾಪುರ ಕೃಷ್ಣಪ್ಪ, ಕೊಂಚಿಗೇರಿ ದಾಸಾಪುರ ದೊಡ್ಡಪ್ಪ, ಕೆಇಬಿ ಸಿಬ್ಬಂದಿ ವರ್ಗದ ತಿಮ್ಮಪ್ಪ, ವಸಂತ ಸೇರಿದಂತೆ ಸುಮಾರು ನೂರಾರು ಜನ ರೈತರು ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...