Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರಾವರಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಏಪ್ರಿಲ್. 02  : ತಾಲೂಕಿನ ವಾಣಿವಿಲಾಸ ಜಲಾಶಯದಿಂದ ನಿಯಮ ಮೀರಿ ಹೆಚ್ಚು ನೀರು ಹರಿಸಿರುವ ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

ನಿರ್ಲಕ್ಷ್ಯ ತೊರಿರುವ ಅಧಿಕಾರಿಗಳ ವಿರುದ್ಧ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. 89 ವರ್ಷಗಳ ನಂತರ ವಿವಿ ಸಾಗರ ಡ್ಯಾಂ ಭರ್ತಿಯಾಗಿ ಕೋಡಿ ಬಿದ್ದಿತ್ತು. 18 ತಿಂಗಳಲ್ಲಿ 20 ಅಡಿ ನೀರು ಡ್ಯಾಂನಿಂದ ಖಾಲಿಯಾಗಿದೆ.

ನೀರಾವರಿ ಇಲಾಖೆಯ ಆಯುಕ್ತರು ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರಿನ ಸಲುವಾಗಿ 0.25 ಟಿಎಂಸಿ ನೀರು ಹರಿಸುವಂತೆ ಸರ್ಕಾರ ಆದೇಶಿಸಿತ್ತು. ಅದರಂತೆ 2024, ಮಾರ್ಚ್ 21ರಿಂದ ನದಿ ಪಾತ್ರಕ್ಕೆ ದಿನನಿತ್ಯ 600 ಕ್ಯೂಸೆಕ್ ನೀರು ಹರಿಯುತ್ತದೆ. 13 ದಿನಕ್ಕೆ 0.78 ಕ್ಯೂಸೆಕ್ ನೀರು ಹರಿಸಲಾಗಿದೆ. ಸರಾಸರಿ ಮುಕ್ಕಾಲು ಟಿಎಂಸಿ ನೀರು ಈಗಾಗಲೇ ಜಲಾಶಯದಿಂದ ಹರಿದು ಹೋಗಿದೆ. ಆದರೂ ಇದುವರೆಗೂ ಅಧಿಕಾರಿಗಳು ಮೇಲಾಧಿಕಾರಿಗಳ ಆದೇಶವನ್ನು ಉಲ್ಲಂಘನೆ ಮಾಡಿ, ದಿನನಿತ್ಯ ನೀರು ಬಿಡುತ್ತಿದ್ದಾರೆ ಆದ್ದರಿಂದ, ತಾವುಗಳು ವೈಯಕ್ತಿಕ ಗಮನ ಹರಿಸಿ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೇಂದು ಒತ್ತಾಯಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಹವಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಪ್ರಮಾಣ ಕಡಿಮೆ ಬೀಳುವ ಸಂಭವವಿದೆ ಎಂದು ಸೂಚಿಸುತ್ತಾರೆ. ಆದ್ದರಿಂದ ಈಗ ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ, ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ನಿರಂತರವಾಗಿ ಹರಿಯುವುದರಿಂದ ಹೆಚ್ಚಾಗಿ ನೀರು ಬಳಕೆ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗಬಹುದು ಮುಂದಾಲೋಚನೆಯ ದೃಷ್ಟಿಯಿಂದ ಜನರಲ್ಲಿ ಅರಿವು ಮೂಡಿಸಿ, ನೀರಿನ ಬಳಕೆ ಕಡಿಮೆ ಮಾಡುವ ಸಲುವಾಗಿ ಎರಡು ದಿನಕ್ಕೆ ಒಂದು ಬಾರಿ ನೀರು ಬಿಡುವಂತೆ ಜಿಲ್ಲಾಡಳಿತ ಮುಂದಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಜೀವರಾಶಿಗಳನ್ನ ಆರಕ್ಷಿಸಬೇಕಾಗಿ ತಮ್ಮಲ್ಲಿ ಕೋರುತ್ತೇವೆಂದು ಪತ್ರದ ಮೂಲಕ ರೈತ ಸಂಘ ಒತ್ತಾಯಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!