Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಸೋಲಿಸಬೇಕೆಂದರೆ, ಮಗಳು ಕಾಂಗ್ರೆಸ್ ಸೇರಿ ಗೆಲ್ಲಿಸಬೇಕೆನ್ನುತ್ತಿದ್ದಾರೆ : ಸಿಪಿ ಯೋಗೀಶ್ವರ್ ಮಗಳ ನಡೆ ಏನು..?

Facebook
Twitter
Telegram
WhatsApp

ರಾಮನಗರ: ಸಿಪಿ ಯೋಗೀಶ್ವರ್ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಸೋಲಿಸಬೇಕೆಂದು ಪಣ ತೊಟ್ಟಿದ್ದಾರೆ. ಅದರಲ್ಲು ತನ್ನ ಶತ್ರು ಎಂದೇ ಭಾವಿಸಿದ್ದ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೆ ತಡ, ಅವರನ್ನು ಭೇಟಿ ಮಾಡಿ, ಬೆಂಗಳೂರು ಗ್ರಾಮಾಂತರದ ಬಗ್ಗೆ ಚರ್ಚೆ ನಡೆಸಿದ್ದರು. ಇದೀಗ ಸಿಪಿ ಯೋಗೀಶ್ವರ್ ಪುತ್ರಿ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ನಿಶಾ ಯೋಗೀಶ್ವರ್ ಪ್ರತಿಕ್ರಿಯೆ ನೀಡಿದ್ದು, ‘ನಾನು ಕಾಂಗ್ರೆಸ್ ಸೇರುವುದು ನನ್ನ ಕುಟುಂಬದವರಿಗಿಂತ ನನ್ನ ವೈಯಕ್ತಿಕ ನಿಲುವು. ಈ ಹಿಂದೆ ಕಾಂಗ್ರೆಸ್ ಸೇರುವುದಕ್ಕಾಗಿಯೇ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿದ್ದೆ. ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೇರ್ಪಡೆಯಾದರೆ ಮಾತ್ರ ಡಿಕೆ ಸುರೇಶ್ ಪರ ಮತಯಾಚನೆ ಮಾಡುತ್ತೀನಿ. ಲೋಕಸಭಾ ಚುನಾವಣೆಯ ನಂತರ ಸೇರ್ಪಡೆಗೊಳ್ಳುವುದಾದರೇ ಮತಯಾಚನೆ ಮಾಡುವುದಿಲ್ಲ.

ನಾನು ಚಿಕ್ಕವಯಸ್ಸಿನಿಂದಲೂ ಚನ್ನಪಟ್ಟಣದಲ್ಲಿ ಬೆಳೆದ ಮಗಳು. ಚನ್ನಪಟ್ಟಣದ ಜನರು ನನ್ನ ಕುಟುಂಬವಿದ್ದಂತೆ. ನಾನು ಕಾಂಗ್ರೆಸ್ ಸೇರುವುದು ನನ್ನ ನಿರ್ಧಾರವೇ ವಿನಃ ಕುಟುಂಬದವರ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯ ಪೈಪೋಟಿ ನಡುವೆ ರಾಮನಗರ, ಅಪ್ಪ-ಮಗಳ ಪ್ರಚಾರದ ಪೈಪೋಟಿಗೂ ಸಾಕ್ಷಿಯಾಗುತ್ತ ಅಂತ ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!