Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೀಘ್ರವೇ ಬಿಎಡ್ ಕಾಲೇಜುಗಳ ಶುಲ್ಕ ಹೆಚ್ಚಳ

---Advertisement---

ಬೆಂಗಳೂರು: ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಧು ಜಿ ಮಾದೇಗೌಡ ಅವರು ಕೇಳಿದ ಬಿಎಡ್ ಕಾಲೇಜುಗಳ ಪ್ರಶ್ನೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದಿದ್ದಾರೆ.

ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಕ್ರಮ ತೆಗೆದುಕೊಳ್ತೀವಿ. ಅನೇಕ ವರ್ಷಗಳಿಂದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಜಾಸ್ತಿ ಇದೆ. ಹೀಗಾಗಿ ರಾಜ್ಯದಲ್ಲೂ ಶುಲ್ಕ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ. ಶುಲ್ಕ ಪರಿಷ್ಕರಣೆ ಸಂಬಂಧ ಉನ್ನತ ಶಿಕ್ಷಣ ಇಲಾಖೆ 6 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಿದೆ. ವರದಿ ಬಂದ ಕೂಡಲೇ ಬಿ.ಎಡ್ ಕಾಲೇಜುಗಳ ಪರಿಷ್ಕರಣೆ ಮಾಡ್ತೀವಿ. ಈ ಶೈಕ್ಷಣಿಕ ವರ್ಚವೇ ಶುಲ್ಕ ಪರಿಷ್ಕರಣೆ ಕ್ರಮ ತೆಗೆದುಕೊಳ್ತೀವಿ ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರು ಪ್ರಶ್ನೆ ಕೇಳಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಉತ್ತಮ. ಆದರೆ ಎಲ್ಲಾ ವಿವಿಯಲ್ಲಿ ಏಕರೂಪ ವೇಳಾಪಟ್ಟಿ ಜಾರಿ ಆಗುತ್ತಿಲ್ಲ. ರಾಜ್ಯದ ಎಲ್ಲಾ ವಿವಿಗಳು ಏಕರೂಪದ ವೇಳಾಪಟ್ಟಿಯಂತೆ ನಡೆಯಲು ಕ್ರಮ ಆಗಬೇಕು. ಖಾಸಗಿ ವಿವಿಗಳನ್ನು ಸರ್ಕಾರ ಏಕರೂಪ ವೇಳಾಪಟ್ಟಿ ಅಡಿ ತರಬೇಕು ಅಂತ ಒತ್ತಾಯಿಸಿದೆ ಎಂದಿದ್ದಾರೆ. ಇದಕ್ಕೆ ಉತ್ತರಸಿದ ಸುಧಾಕರ್ ಅವರು, 2021ರಲ್ಲಿ UYCMS ಜಾರಿ ಮಾಡಿದ್ದೇವೆ. ಇದರ ಅಡಿ ಎಲ್ಲಾ ವಿವಿಗೂ ಏಕರೂಪದ ವೇಳಾಪಟ್ಟಿ ಮಾಡುತ್ತಾ ಇದ್ದೇವೆ. ಕೋವಿಡ್ ಸಮಯದಲ್ಲಿ ಒಂದೊಂದು ವಿವಿಯಲ್ಲಿ ಒಂದೊಂದು ವ್ಯವಸ್ಥೆ ಇತ್ತು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now