ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 : ಡಿಎಪಿ ಮತ್ತು ಯೂರಿಯಾ ಗೊಬ್ಬರದ ಜೊತೆಗೆ ಒತ್ತಾಯವಾಗಿ ಬೇರೆ ಉತ್ಪಾದನೆಗಳನ್ನು ಲಿಂಕ್ಗೊಳಿಸುವುದನ್ನು ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೀಡ್ಸ್ ಕೆಮಿಕಲ್ಸ್ ಫರ್ಟಿಲೈಜರ್ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಎಲ್ಲಾ ರಸಗೊಬ್ಬರಗಳ ಎಂಆರ್ಪಿ. ಮೇಲೆ ಎಂಟು ಪರ್ಸೆಂಟ್ ಡೀಲರ್ ಲಾಭಾಂಶವಿರುವಂತೆ ನೋಡಿಕೊಳ್ಳಬೇಕು. ಗೊಬ್ಬರ, ಬೀಜ, ಕೀಟನಾಶಕ ಸ್ಯಾಂಪಲ್ ಕಳಪೆ ಬಂದಾಗ ಕಂಪನಿಯವರ ಮೇಲೆ ಮಾತ್ರ ಕೇಸ್ ಹಾಕಿ ಡೀಲರ್ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಡೀಲರ್ಗಳಿಂದ ಸ್ಯಾಂಪಲ್ ಡ್ರಾ ಮಾಡಿದಾಗ ಸ್ಯಾಂಪಲ್ಲಿನ ಹಣವನ್ನು ಕಡ್ಡಾಯವಾಗಿ ಡೀಲರ್ಗಳಿಗೆ ಪಾವತಿಸಬೇಕು. ಅಧಿಕಾರಿಗಳು ತಪಾಸಣೆಗಾಗಿ ಅಂಗಡಿಗಳಿಗೆ ಭೇಟಿ ಕೊಟ್ಟ ನಂತರ ಮಾಧ್ಯಮಗಳಿಗೆ ಹೇಳಿಕೆಗಳನ್ನು ಕೊಡುವಾಗ ದಾಳಿ ಎನ್ನುವ ಪದ ಮತ್ತು ಅಂಗಡಿಗಳ ಫೋಟೋಗಳನ್ನು ಬಳಸಬಾರದು. ಎಫ್ಐಡಿ. ಮುಖಾಂತರ ಯೂರಿಯಾ ಗೊಬ್ಬರ ಮಾರಾಟ ಮಾಡುವ ಆದೇಶವನ್ನು ಸ್ವಾಗತಿಸುತ್ತೇವೆ. ನೀರಾವರಿ ಮತ್ತು ಒಣ ಬೇಸಾಯಗಾರರಿಗೆ ಬೆಳೆಗಳ ಆಧಾರದ ಮೇಲೆ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕು. ಎಫ್ಐಡಿ ಮುಖಾಂತರ ಡಿಎಪಿ ಮತ್ತು ಯೂರಿಯಾ ಮಾರಾಟ ಮಾಡುವುದನ್ನು ಹಿಂಗಾರು ಬೆಳೆಗಳವರೆಗೆ ಕಡ್ಡಾಯಗೊಳಿಸಬೇಕು. ಬೀಜ ಮಾರಾಟ ಯ್ಯಾಪನ್ನು ಮಾರಾಟ ಸ್ನೇಹಿಯಾಗಿ ರೂಪಿಸಬೇಕೆಂದು ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಜಗದೀಶ್, ಸಿದ್ದಲಿಂಗಮೂರ್ತಿ, ಮಂಜುನಾಥ್, ಬಸವರಾಜ್, ಹರ್ಷ, ಅಶೋಕ್, ಗಿರೀಶ್, ತಿಪ್ಪೇಸ್ವಾಮಿ, ಚಿದಾನಂದ, ಮನೋಜ್ಕುಮಾರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.



















