Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಲಿತ ಚಳುವಳಿಗೆ ಐವತ್ತು ವರ್ಷ : ಆಗಸ್ಟ್ 7 ರಂದು ಬೆಂಗಳೂರು ಚಲೋ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಚಳುವಳಿಗೆ ಐವತ್ತು ವರ್ಷಗಳು ತುಂಬಿರುವುದರಿಂದ ಆ.7 ರಂದು ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯಿಂದ ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನದಲ್ಲಿ ಐವತ್ತು ವರ್ಷಗಳ ಸಂಭ್ರಮೋತ್ಸವಕ್ಕೆ ಜಿಲ್ಲೆಯ ಆರು ತಾಲ್ಲೂಕುಗಳಿಂದಲೂ ದಲಿತರು ಹೊರಡಬೇಕು. ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಟ್ಟುಹಾಕಿದ ಪ್ರೊ.ಬಿ.ಕೃಷ್ಣಪ್ಪನವರು ನಾಡಿನಾದ್ಯಂತ ಚಳುವಳಿಯನ್ನು ಹಬ್ಬಿಸಿದ್ದಾರೆ. ಹಾಗಾಗಿ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ಸಂಭ್ರಮೋತ್ಸವದಲ್ಲಿ ಭಾಗವಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ ಶಕ್ತಿ ತುಂಬುವಂತೆ ಕೆಂಗುಂಟೆ ಜಯಪ್ಪ ಮನವಿ ಮಾಡಿದರು.

ಭ್ರಷ್ಠಾಚಾರ ಮುಕ್ತ ವೇದಿಕೆ ರಾಜ್ಯಾಧ್ಯಕ್ಷ ಓಬಳೇಶ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೊಳಲ್ಕೆರೆ ತಾಲ್ಲೂಕು ಸಂಚಾಲಕ ಸುಂದರಮೂರ್ತಿ, ಚಿತ್ರದುರ್ಗ ತಾಲ್ಲೂಕು ನೂತನ ಸಂಚಾಲಕ ಗುರುಮೂರ್ತಿ, ಸೋಮಶೇಖರ್, ನವೀನ್, ಶಿವಣ್ಣ, ಶ್ರೀನಿವಾಸ್, ಪ್ರಭು, ಮಂಜಣ್ಣ, ಗೌರಮ್ಮ, ವೆಂಕಟೇಶ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...