Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಕಳದಲ್ಲಿ ಸುನಿಲ್ ಕುಮಾರ್ ಮತ್ತು ಮುತಾಲಿಕ್ ನಡುವೆ ಫೈಟ್ : ಶ್ರೀರಾಮಸೇನೆ ಮನವಿಗೆ ಸಿಎಂ ಏನ್ ಅಂದ್ರು..?

Facebook
Twitter
Telegram
WhatsApp

ಮಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆ ಹಲವು ರೀತಿಯ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಪಕ್ಷ ಪಕ್ಷದಲ್ಲಿಯೇ ಕಾಂಪಿಟೇಷನ್ ಶುರುವಾಗಿದೆ. ಇದೀಗ ಶ್ರೀರಾಮಸೇನೆ ಹಾಗೂ ಬಿಜೆಪಿ ನಡುವೆ ಚುನಾವಣಾ ಯುದ್ಧ ನಡೆಯಲಿದೆ. ಕಾರ್ಕಳದಿಂದ ಮುತಾಲಿಕ್ ಹಾಗೂ ಸುನಿಲ್ ಕುಮಾರ್ ಎದುರು ಬದುರಾಗಲಿದ್ದಾರೆ.

ಈಗಾಗಲೇ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನಾನು ಕಾರ್ಕಳದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಘೊಷಣೆ ಮಾಡಿಕೊಂಡಿದ್ದಾರೆ. ಅವರ ಬೆಂಬಲಿಗರು ಕೂಡ ಬಿಜೆಪಿಗೆ ಮನವಿ ಮಾಡಿದ್ದಾರೆ. ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿಯ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸಬೇಡಿ. ಬಿಜೆಪಿಯಿಂದಾನೇ ಟಿಕೆಟ್ ಕೊಟ್ಟರು ಓಕೆ. ಇಲ್ಲವಾದರೆ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಾರೆ. ಆದರೆ ಅಭ್ಯರ್ಥಿ ಹಾಕಬೇಡಿ ಎಂದಿದ್ದಾರೆ.

ಈ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ಇದ್ದಾರೆ. ಮೂರು ಬಾರಿ ಗೆದ್ದಿದ್ದಾರೆ. ಸಚಿವ ಕೂಡ ಆಗಿದ್ದಾರೆ. ಅವರು ಮನವಿ ಮಾಡಿದ್ದಾರೆ. ಮಾಡಲಿ. ನಮ್ಮ ರಾಷ್ಟ್ರೀಯ ಪಕ್ಷ. 224 ಕ್ಷೇತ್ರದಲ್ಲೂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!