Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಟಿಕೆಟ್ ಗಾಗಿ ಫೈಟ್ : ಶಾಮನೂರು ಶಿವಶಂಕರಪ್ಪ ಅಥವಾ ಹೊಸಬರಿಗೆ ಸಿಗಲಿದೆಯಾ ಟಿಕೆಟ್

Facebook
Twitter
Telegram
WhatsApp

ದಾವಣಗೆರೆ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ದಾವಣಗೆರೆಯಲ್ಲೂ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗುತ್ತಿದೆ. ಕಾಂಗ್ರೆಸ್ ನಲ್ಲಿ ಸಚುವ ಎಸ್ ಎಸ್ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಇನ್ ಸೈಟ್ಸ್ ಐಎಎಸ್ ಕೋಚಿಂಗ್ ಸೆಂಟರ್ ನ ಸಂಸ್ಥಾಪಕ ವಿನಯ್ ಕುಮಾರ್ ಅವರ ಹೆಸರು ಹೆಚ್ಚು ಪ್ರಚಲಿತವಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಯುವ ನಾಯಕ ನಿಖಿಲ್ ಕೊಂಡಜ್ಜಿ ಹೆಸರು ತೆರೆಮರೆಯಲ್ಲಿ ಓಡಾಡುತ್ತಿದೆ.

 

ಇತ್ತ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿನಯ್ ಕುಮಾರ್, ಈಗಾಗಲೇ ಪ್ರಚಾರ ಕಾರ್ಯದಲ್ಲೂ ತೊಡಗಿಕೊಂಡಿದ್ದಾರೆ. ಕುರುಬ ಸಮುದಾಯದವರೇ ಆಗಿರುವ ವಿನಯ್ ಕುಮಾರ್ ಅವರು, ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೂ ಈಗಾಗಲೇ ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ದಾವಣಗೆರೆಯಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಸ್ಥರಲ್ಲಿಯೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಶಿವಶಂಕರಪ್ಪ ಅವರ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಕಾರ್ಯ ಆರಂಭಿಸಿದ್ದಾರೆ. ಕುಟುಂಬಸ್ಥರಿಂದ ಈಗಾಗಲೇ ಟಿಕೆಟ್ ಗಾಗಿ ಲಾಭಿ ನಡೆಯುತ್ತಿದೆ. ಈ ಸಂಬಂಧ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಟಿಕೆಟ್ ಗೆ ತಲೆಕೆಡಿಸಿಕೊಂಡಿಲ್ಲ. ಮನೆ ಮನೆಗೆ ಆರೋಗ್ಯ ಸೇವೆ ನೀಡಬೇಕು ಎಂಬ ಕಲ್ಪನೆಯೊಂದಿಗೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಪಾಗುತ್ತಿದೆ. ಲೋಕಸಭಾ ಚುನಾವಣೆಯ ಅಜೆಂಡಾ ಇಟ್ಟುಕೊಂಡು ಈ ಕೆಲಸಗಳ‌ನ್ನು ಮಾಡುತ್ತಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!