Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಣದ ವಿಚಾರಕ್ಕೆ ಜಗಳ : ಕೊಲೆಯಲ್ಲಿ ಅಂತ್ಯವಾಯ್ತು ಜಯಣ್ಣ ಬದುಕು..!

---Advertisement---

ಹಿರಿಯೂರು: ಕೊಟ್ಟ ಸಾಲ ಕೇಳಿದ್ದಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಕೋಪ ತಾರಕಕ್ಕೇರಿ, ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಈ ಜಗಳದಲ್ಲಿ 65 ವರ್ಷದ ಜಯಣ್ಣ ಮೃತ ಪಟ್ಟಿದ್ದಾರೆ. ಹಿರಿಯೂರು ತಾಲೂಕಿನ ದಿಂಡವಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

2021 ಎಪ್ರಿಲ್ ನಲ್ಲಿ ಒಂದು ಆಕ್ಸಿಡೆಂಟ್ ಆಗಿತ್ತು. ಗಂಗಾಧರ್ ಹಾಗೂ ಅಣ್ಣಪ್ಪನ ನಡುವೆ ಅಪಘಾತ ಸಂಭವಿಸಿ, ಅಣ್ಣಪ್ಪ ಸಾವನ್ನಪ್ಪಿದ್ದ. ಆ ಬಳಿಕ ಗಂಗಾಧರ್ ಊರು ಬಿಟ್ಟು ಓಡಿ ಹೋಗಿದ್ದ. ಜೊತೆಗೆ ಆಕ್ಸಿಡೆಂಟ್ ನಲ್ಲಿ ತೀರಿ ಹೋಗಿದ್ದ ಅಣ್ಣಪ್ಪನ ಬಳಿ ಸಾಲವನ್ನು ಪಡೆದಿದ್ದ. ಅಣ್ಣಪ್ಪ, ಜಯಣ್ಣನ ಮಗನಾಗಿದ್ದ. ಸಾಲ ಕೊಟ್ಟಿದ್ದ ವಿಚಾರ ಜಯಣ್ಣನಿಗೂ ತಿಳಿದಿತ್ತು.

ಊರು ಬಿಟ್ಟಿದ್ದ ಗಂಗಾಧರ್ ಭೂತಪ್ಪನ ಹಬ್ಬಕ್ಕೆ ಹಾಜರಾಗಿದ್ದ. ಸೋಮವಾರದಂದು ಊರಿನಲ್ಲಿ ಕಾಣಿಸಿಕೊಂಡಿದ್ದ. ಗಂಗಾಧರ್ ನನ್ನು ಕಂಡ ಜಯಣ್ಣ, ಮಗನಿಂದ ಪಡೆದ ಸಾಲ ವಾಪಾಸ್ ಕೊಡಬೇಕೆಂದು ಕೇಳಿದ್ದ. ಆದರೆ ಆ ಸಮಯದಲ್ಲಿ ಗಂಗಾಧರ್, ನಾನು ಯಾವ ಹಣವನ್ನು ಕೊಡುವಂತೆಯೇ ಇಲ್ಲ. ಎಲ್ಲಾ ತೀರಿದೆ‌ ಎಂದಿದ್ದ. ಆ ಕ್ಷಣದಲ್ಲಿ ಮಾತಿಗೆ ಮಾತು ಬೆಳೆದಿತ್ತು, ಕೋಪ ತಾರಕಕ್ಕೆ ಏರಿತ್ತು. ಅದರ ಪರಿಣಾಮ ಜಯಣ್ಣನನ್ನು ಕೊಲೆ‌ ಮಾಡಲಾಗಿದೆ.

ಈ ಜಗಳದಲ್ಲಿ ಗಂಗಾಧರ್, ಜಯಣ್ಣನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದು, ನೆಲಕ್ಕೆ ಬೀಳಿಸಿದ್ದ. ಇದರಿಂದ ಜಯಣ್ಣ ಅಂಗಾತವಾಗಿ ಬಿದ್ದು ಗಾಯಗೊಂಡಿದ್ದ. ತಕ್ಷಣ ಆತನನ್ನು ಸ್ಥಳೀಯ ದಿಂಡವಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಮಾರ್ಗಮಧ್ಯೆ ಜಯಣ್ಣನ ಉಸಿರು ನಿಂತಿದೆ ಎಂದು ಹೇಳಿದರು. ದುರುದ್ದೇಶದಿಂದ ಜಯಣ್ಣನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಆರೋಪಿ ಗಂಗಾಧರ್ ವಿರುದ್ಧ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment