Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು : ನಿಯಮ ಮೀರಿದ್ರಾ ಆಯೋಜಕರು..?

---Advertisement---

ಬೆಂಗಳೂರು: ಕರಾವಳಿಯ ಪ್ರಮುಖ ಕ್ರೀಡೆ ಕಂಬಳ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದೆ. ಕಂಬಳವನ್ನು ಬಹಳ ಹತ್ತಿರದಿಂದ ನೋಡಿ ಸಂತಸಗೊಂಡಿದ್ದಾರೆ. ಆದರೆ ಈ ಬೆನ್ನಲ್ಲೇ ಕರಾವಳಿ ಆಯೋಜಕರ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕುವಂತೆ ಇಲ್ಲ. ಅದಕ್ಕೆ ಬಿಬಿಎಂಪಿ ನಿಯಮ ಮಾಡಿದ್ದು, ದಂಡ ವಿಧಿಸಲಾಗುತ್ತದೆ. ಅನಿವಾರ್ಯತೆ ಎಂದಾಗ ಬಿಬಿಎಂಪಿ ಅನುಮತಿ ಪಡೆಯಬೇಕಾಗುತ್ತದೆ. ಆದರೆ ಕಂಬಳ ಆಯೋಜಕರು ಅನುಮತಿಯನ್ನು ಪಡೆದಿಲ್ಲ, ಬೆಂಗಳೂರಿನೆಲ್ಲೆಡೆ ಎಲ್ಲೆಂದರಲ್ಲಿ ಬ್ಯಾನರ್ ಗಳನ್ನು ಹಾಕಲಾಗಿದೆ. ಹೀಗಾಗಿ ಕಂಬಳ ಆಯೋಕರ ವಿರುದ್ಧ ದೂರು ದಾಖಲಾಗಿದೆ.

ಬಿಬಿಎಂಪಿ ವಾರ್ಡ್ ನ ಕಂದಾಯ ನಿರೀಕ್ಷಕ ನೀಡಿದ ದೂರಿನ ಮೇರೆಗೆ ಕಂಬಳ ಆಯೋಜಕರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳವನ್ನು ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಹೀಗಾಗಿ ಕಂಬಳಕ್ಕೆ ಶುಭಾಶಯ ಕೋರುವ ಬ್ಯಾನರ್, ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಬೆಂಗಳೂರು ನಗರದಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕುವುದಕ್ಕೆ ಅನುಮತಿ ಇಲ್ಲದ ಕಾರಣ, ದೂರು ದಾಖಲಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment