Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ಯಾಕ್‍ಲಾಗ್ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಿ : ಮಾರಸಂದ್ರ ಮುನಿಯಪ್ಪ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25 : ಒಳ ಮೀಸಲಾತಿಯನ್ನು ಜಾರಿಗೊಳಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಯಾಕ್‍ಲಾಗ್ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಬೇಕೆಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆಯೆಂದು ಸುಪ್ರಿಂಕೋರ್ಟ್ ತೀರ್ಪು ನೀಡಿ ಒಂದು ವರ್ಷಗಳಾದರೂ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತರುವಲ್ಲಿ ತಡವಾಯಿತು. ಕಾಂಗ್ರೆಸ್‍ಗೆ ದಲಿತರ ಓಟು ಬೇಕು. ಹಿತ ಬೇಕಾಗಿಲ್ಲ. ನಾಗಮೋಹನ್‍ದಾಸ್ ಆಯೋಗ ದತ್ತಾಂಶವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿರುವ ಆಧಾರದ ಮೇಲೆ ಮಾದಿಗರಿಗೆ ಶೇ.6, ಒಲೆಯರಿಗೆ ಶೇ.6, ಲಂಬಾಣಿ, ಭೋವಿ, ಕೊರಮ, ಕೊರಚ ಜನಾಂಗಕ್ಕೆ ಶೇ.5 ರಷ್ಟು ಮೀಸಲಾತಿ ನೀಡಿದ್ದು, ಅಲೆಮಾರಿ, ಅರೆಅಲೆಮಾರಿಗಳಿಗೆ ಅನ್ಯಾಯವಸಗಿದೆ ಎಂದು ಆಪಾದಿಸಿದರು.

ಒಳ ಮೀಸಲಾತಿಗಾಗಿ ಪ್ರೊ.ಬಿ.ಕೃಷ್ಣಪ್ಪ 1995 ರಲ್ಲಿ ಚಳುವಳಿ ಆರಂಭಿಸಿದರು. ಅಂದಿನಿಂದ ಅವರ ಜೊತೆ ಕೂಡಿಕೊಂಡು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಹರಿಯಾಣ, ಪಂಜಾಬ್‍ನಲ್ಲಿ ವಾಲ್ಮೀಕಿ ಜನಾಂಗ 1978-79 ರಲ್ಲಿ ಹೋರಾಟ ಆರಂಭಿಸಿದಾಗ ಚಮ್ಮಾರರು ಒಪ್ಪಿರಲಿಲ್ಲ. ಆಂಧ್ರ, ಕರ್ನಾಟಕ, ಕೇರಳ, ತಮಿಳುನಾಡು ಒರಿಸ್ಸಾದಲ್ಲೂ ಹೋರಾಟ ಶುರುವಾಯಿತು. ಜನತಾದಳ, ಬಿಜೆಪಿ. ಪಕ್ಷಗಳು ನಮ್ಮನ್ನು ಯಾಮಾರಿಸಿದವು ಎಂದರು.

ಎಸ್ಸಿ.ಎಸ್ಟಿ. ಆಯೋಗ ರಚಿಸಬೇಕು. ಐವತ್ತು ಸಾವಿರ ಹುದ್ದೆಗಳು ಖಾಲಿಯಿವೆ. ನಿರುದ್ಯೋಗಿಗಳು ಜಾಸ್ತಿಯಾಗುತ್ತಿದ್ದಾರೆ. ಅತಿ ಹಿಂದುಳಿದವರಿಗೆ ಶೇ.1 ರಷ್ಟು ಮೀಸಲಾತಿ ನೀಡಬೇಕು. ಕೋವೇರಹಟ್ಟಿಯ ವರ್ಷಿತಾಳನ್ನು ಕೊಲೆಗೈದಿರುವವರಿಗೆ ಕಠಿಣ ಶಿಕ್ಷೆಯಾಗಬೇಕು. ಎಂಟರಿಂದ ಹತ್ತು ಲಕ್ಷ ರೂ. ಪರಿಹಾರವನ್ನು ಕುಟುಂಬಕ್ಕೆ ನೀಡಿ ಐದು ಎಕರೆ ಜಮೀನು ಮಂಜೂರು ಮಾಡಬೇಕು. ಎಸ್ಸಿ. ಎಸ್ಟಿ.ಗಳಲ್ಲಿ ದೌರ್ಜನ್ಯ, ದಬ್ಬಾಳಿಕೆ ನಡೆದರೆ ಜಾತಿ ನಿಂದನೆಯಾಗುವುದಿಲ್ಲ ಎನ್ನುವುದು ಸರಿಯಲ್ಲ. ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಮಾರಸಂದ್ರ ಮುನಿಯಪ್ಪ ಆಗ್ರಹಿಸಿದರು.

ದಲಿತರ ಮೇಲೆ ಎಲ್ಲಾ ಕಡೆ ದೌರ್ಜನ್ಯಗಳು ನಡೆಯುತ್ತಿದೆ. ರಾಜ್ಯಾದ್ಯಂತ ಸುತ್ತಾಡಿದ್ದೇನೆ. ದಲಿತ ಹೆಣ್ಣು ಮಕ್ಕಳು ಮರ್ಯಾದೆಯಿಂದ ಬದುಕುವಂತಿಲ್ಲ. ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿರುವ ಈ ಭಾಗದ ಶಾಸಕ ಕೆ.ಸಿ.ವೀರೇಂದ್ರಪಪ್ಪಿಯಿಂದ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದಿವೆ. ಸಮಾಜಘಾತುಕರು ರಾಜಕೀಯಕ್ಕೆ ಬರಬಾರದು. ಕಾಂಗ್ರೆಸ್ ನಾಯಕರು ಹಣ ಪಡೆದು ಚುನಾವಣೆಯಲ್ಲಿ ಪಪ್ಪಿಗೆ ಟಿಕೇಟ್ ನೀಡಿದ್ದಾರೆ. ಮತದಾರರು ಆಮಿಷಕ್ಕೆ ಒಳಗಾಗಿ ಗೆಲ್ಲಿಸಿದ್ದಾರೆಂದು ದೂರಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭಿವೃದ್ದಿಗೆ ಮೀಸಲಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಬೇರೆ ಉದ್ದೇಶಗಳಿಗೆ ಬಳಸಿದ್ದಾರೆ. ಎಸ್.ಟಿ.ಅಭಿವೃದ್ದಿ ನಿಗಮದ ಇನ್ನೂರು ಕೋಟಿ ರೂ.ಗಳು ಬೇರೆ ಬೇರೆ ಕಡೆ ಚುನಾವಣೆಗೆ ಹರಿದಾಡಿವೆ. ಕಾಂಗ್ರೆಸ್‍ನಲ್ಲಿರುವ ಶಾಸಕ, ಸಂಸದರು, ವಿಧಾನಪರಿಷತ್ ಸದಸ್ಯರು ಯಾರು ದಲಿತರ ಪರವಾಗಿ ಧ್ವನಿ ಎತ್ತುತ್ತಿಲ್ಲ. ಸಚಿವ ರಾಜಣ್ಣನವರನ್ನು ವಜಾ ಮಾಡಿದ ಕಾಂಗ್ರೆಸ್ ಹೈಕಮಾಂಡ್ ಆರ್.ಎಸ್.ಎಸ್.ಹಾಡು ಹಾಡಿದ ಡಿ.ಕೆ.ಶಿವಕುಮಾರ್ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ. ಕೆ.ಹೆಚ್.ಮುನಿಯಪ್ಪ ಏಳು ಬಾರಿ ಶಾಸಕರಾಗಿ ಎರಡು ಸಾರಿ ಮಂತ್ರಿಯಾಗಿದ್ದಾರೆ. ಅಂತಹ ಹಿರಿಯರಿಗೆ ಆಹಾರ ಇಲಾಖೆ ಖಾತೆ ನೀಡಿದೆ. ಆರ್.ಬಿ.ತಿಮ್ಮಾಪುರ್‍ಗೆ ಅಬಕಾರಿ ಖಾತೆ ವಹಿಸಲಾಗಿದೆ. ಇದರಿಂದ ಯಾರಿಗೂ ಸಹಾಯ ಮಾಡಲು ಆಗಲ್ಲ. ಅದಕ್ಕಾಗಿ ಮುಂದಿನ ದಿನಗಳಲ್ಲ ಸಮಾಜ ಕಲ್ಯಾಣ ಖಾತೆ ನೀಡಬೇಕು. ರೈತರು ಕಾರ್ಮಿಕರು ಸಮಸ್ಯೆಯಲ್ಲಿದ್ದಾರೆ. ಲಂಬಾಣಿ ಸಮಾಜಕ್ಕೆ ಪ್ರಾತಿನಿಧ್ಯವಿಲ್ಲದಂತಾಗಿದೆ ಎಂದು ಹೇಳಿದರು.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಸಂಯೋಜಕ ಆರ್.ಮುನಿಯಪ್ಪ, ರಾಜ್ಯ ಕಾರ್ಯದರ್ಶಿಗಳಾದ ಭೀಮನಕೆರೆ ಶಿವಮೂರ್ತಿ, ದೊಡ್ಡೆಟ್ಟಪ್ಪ, ಜಿಲ್ಲಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷರುಗಳಾದ ತಿಮ್ಮಪ್ಪ, ದೇವೇಗೌಡ, ಪ್ರಧಾನ ಕಾಯದರ್ಶಿ ಹನುಮಂತರಾಯ, ಖಜಾಂಚಿ ಶ್ರೀನಿವಾಸ್, ಮಹಾಂತೇಶ್ ಕೂನಬೇವು ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...