Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಅಂತಿಮ ಸಿದ್ಧತೆ: ಸಚಿವ ಬೈರತಿ ಸುರೇಶ್

---Advertisement---

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಂಬಂಧ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು ವಿಶೇಷ ಉದ್ದೇಶಿತ ವಾಹನ (SPV) ಒಂದನ್ನು ರಚನೆ ಮಾಡಲಾಗುವುದು ಎಂದು ಹೇಳಿದರು.

ಸ್ಮಾರ್ಟ್ ಕಾರ್ಡ್ ಸ್ವರೂಪ, ತಾಂತ್ರಿಕ ನೆರವು, ಟೆಂಡರ್ ಪ್ರಕ್ರಿಯೆ ಮತ್ತು ವಿತರಣಾ ವಿಧಾನಗಳ ಕುರಿತು ಸಾರಿಗೆ ನಿಗಮಗಳಿಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ‘ವಹಿವಾಟು ಸಲಹೆಗಾರರ ಸಮಿತಿ’ಯನ್ನು ನೇಮಕ ಮಾಡಲಾಗಿದೆ. ಈ ಸಮಿತಿಯು ಪ್ರಸಕ್ತ ತಿಂಗಳ ಅಂತ್ಯದೊಳಗೆ ತನ್ನ ವರದಿಯನ್ನು ನೀಡಲಿದ್ದು, ಅದರ ಆಧಾರದ ಮೇಲೆ ಮುಂದಿನ ಪ್ರಕ್ರಿಯೆಗಳು ನಡೆಯಲಿವೆ. ಕೋಟ್ಯಂತರ ಸ್ಮಾರ್ಟ್ ಕಾರ್ಡ್ಗಳ ವಿತರಣೆ ಅಗತ್ಯವಿರುವುದರಿಂದ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ಗಳನ್ನು ಉಚಿತವಾಗಿ ನೀಡಲಾಗುವುದು. ಪುರುಷ ಪ್ರಯಾಣಿಕರು ನಿಗದಿತ ಹಣ ಪಾವತಿ ಮಾಡುವ ಆಧಾರದ ಮೇಲೆ ಸ್ಮಾರ್ಟ್ ಕಾರ್ಡ್ಗಳನ್ನು ಖರೀದಿಸಬೇಕಾಗುತ್ತದೆ. ಮಹಿಳಾ ಮತ್ತು ಪುರುಷ ಪ್ರಯಾಣಿಕರಿಬ್ಬರನ್ನೂ ಒಳಗೊಂಡಂತೆ ಒಟ್ಟಾರೆಯಾಗಿ ರಾಜ್ಯದಲ್ಲಿ ಸುಮಾರು 2.5 ಕೋಟಿಯಿಂದ 3 ಕೋಟಿ ಕಾರ್ಡ್ಗಳ ಅವಶ್ಯಕತೆ ಇರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now