Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈತ್ರಿ ಮಾತುಕತೆಗೆ ಫೈನಲ್ ಟಚ್ : ದಳಪತಿಗಳು ಡಿಮ್ಯಾಂಡ್ ಇಟ್ಟ ಆರು ಕ್ಷೇತ್ರಗಳು ಯಾವುವು..?

---Advertisement---

ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿದೆ. ಈಗಾಗಲೇ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಸ್ಪಷ್ಟನೆ ನೀಡಲಾಗಿದೆ. ಆದರೆ ಅಧಿಕೃತವಾಗಿ ಯಾವುದೇ ಮಾತುಕತೆ ನಡೆಸಿರಲಿಲ್ಲ. ಇದೀಗ ಮೈತ್ರಿ ಮಾತುಕತೆಗೆ ಫೈನಲ್ ಮಾತುಕತೆಗೆ ಡೇಟ್ ಫಿಕ್ಸ್ ಆಗಿದೆ.

ನವೆಂಬರ್ 3 ರಂದು ಮೈತ್ರಿ ಮಾತುಕತೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ. ಈ ಭೇಟಿ ವೇಳೆಯೇ ಲೋಕಸಭಾ ಚುನಾವಣೆಯ ಮೈತ್ರಿಯ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದರ ಜೊತೆಗೆ ಮುಖ್ಯವಾಗಿ ಕ್ಷೇತ್ರ ಹಂಚಿಕೆಗಳ ವಿಚಾರವಾಗಿಯೂ ಮಾತನಾಡಲಿದ್ದಾರೆ. ಆದರೆ ಕೆಲವೊಂದು ಬೆಳವಣಿಗೆಗಳು ರಾಜ್ಯ ಬಿಜೆಪಿ ನಾಯಕರಿಗೇನೆ ವಿಷಯ ತಿಳಿದಿಲ್ಲ. ರಾಜ್ಯ ಬಿಜೆಪಿ ನಾಯಕರನ್ನು ದೂರವಿಟ್ಟು, ಮೈತ್ರಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಜೆಡಿಎಸ್ ಒಟ್ಟು ಆರು ಕ್ಷೇತ್ರಗಳನ್ನು ಕೇಳುವ ಸಾಧ್ಯತೆ ಇದೆ. ಅದರಲ್ಲಿ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಕ್ಷೇತ್ರಗಳನ್ನು ಕೇಳುವ ಸಾಧ್ಯತೆ ಇದೆ. ಇನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಎರಡು ಪಕ್ಷದಿಂದಾನೂ ಅಸಮಾಧಾನವಿದೆ. ಇದೇ ಅಸಮಾಧಾನದಿಂದಾನೇ ಈಗಾಗಲೇ ರಾಜ್ಯಾಧ್ಯಕ್ಷರಾಗಿದ್ದ ಇಬ್ರಾಹಿಂ ಹೊರಗೆ ಉಳಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment