Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಧಾರವಾಡದಲ್ಲಿ ರೈತರ ಜಮೀನಿನ ಪರಿಹಾರ ಹಣ ಕಬಳಿಸಿದ 9 ಅಧಿಕಾರಿಗಳ ವಿರುದ್ಧ ಎಫ್ಐಆರ್..!

---Advertisement---

 

 

ಧಾರವಾಡ: ಕೈಗಾರಿಕಾ ಉದ್ದೇಶಕ್ಕಾಗಿ ರೈತರ ಜಮೀನುಗಳನ್ನ ತೆಗೆದುಕೊಂಡಿದ್ದ KIADB ಕಡೆಯಿಂದ ಬಂದಂತ ಪರಿಹಾರ ಹಣವನ್ನ ಅಧಿಕಾರಿಗಳೇ ನುಂಗಿ ನೀರು ಕುಡಿದಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ 9 ಅಧಿಕಾರಿಗಳು ಸೇರಿ 13 ಜನ ಮೇಲೆ‌ ದೂರು ನೀಡಲಾಗಿದೆ. ಇಟಿಗಟ್ಟಿ ಕರೆಪ್ಪ ಪೂಜಾರ್ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ.

ಇಟಿಗಟ್ಟಿ ಗ್ರಾಮದಲ್ಲಿ ಕರೆಪ್ಪ ಪೂಜಾರ್ ಹೆಸರಿನಲ್ಲಿ ಸುಮಾರು 4.39 ಎಕರೆ ಆಸ್ತಿ ಇದಾಗಿದೆ. ಪಿತ್ರಾರ್ಜಿತ ಆಸ್ತಿಯಾಗಿದ್ದು, 1981ರಿಂದಾನೂ ಕರೆಪ್ಪ ಪೂಜಾರ್ ಹೆಸರಿನಲ್ಲಿಯೇ ಇದೆ. ಇನ್ನು ಈ ಪ್ರದೇಶದಲ್ಲಿ ಕೈಗಾರಿಕಾ ಉದ್ದೇಶವನ್ನು ಹೊಂದಿದ್ದ KIADB ಕರೆಪ್ಪ ಪೂಜಾರ್ ಅವರ ಜಮೀನನ್ನು ವಶಕ್ಕೆ ಪಡೆಯಲಾಗಿತ್ತು. 2021ರಲ್ಲಿ ಈ ಜಮೀನನ್ನು ವಶಕ್ಕೆ ಪಡೆಯಲಾಗಿತ್ತು.

ವಶಕ್ಕೆ ಪಡೆದ ಜಮೀನಿನ ಹಣ ಕರೆಪ್ಪ ಪೂಜಾರ್ ಅವರಿಗೆ ಬರದೆ, ಇನ್ಯಾರದ್ದೋ ಖಾತೆಗೆ ಜಮಾ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. 2.25 ಕೋಟಿ ಹಣವನ್ನು ಬೇರೆಯವರಿಗೆ ವರ್ಗಾವಣೆ ಮಾಡಲಾಗಿದೆ. ತುಕಾರಾಮ್ ಪೂಜಾರ್ ಎಂಬುವವರ ಅಕೌಂಟ್​ಗೆ ಹಣವನ್ನು ಅಧಿಕಾರಿಗಳು ಜಮೆ ಮಾಡಿದ್ದಾರೆ. ಇದರಲ್ಲಿ ತಹಶೀಲ್ದಾರ್, KIADB ಅಧಿಕಾರಿಗಳು ಶಾಮೀಲಾಗಿದ್ದಾರೆಂದು ಕರೆಪ್ಪ ಪೂಜಾರ್ ದೂರು ನೀಡಿದ್ದಾರೆ. ಕೆಎಲ್ಆರ್ ಡಿವಿಜನ್​ನ ಉಪ ತಹಶೀಲ್ದಾರ್ ವೀನಕುಮಾರ್ ತಳವಾರ, ಪ್ರವೀಣ್ ಪೂಜಾರ್, KIADB ಅಧಿಕಾರಿಗಳಾದ ವಸಂತಕುಮಾರ್ ಸಜ್ಜನ್, ಶಂಕರ್ ತಳವಾರ, ಮಹದೇವಪ್ಪ ಶಿಂಪಿ, ಹೇಮಚಂದ್ರ ಚಿಂತಾಮಣಿ, ಮೆಹಬೂಬ ದುಂಡಶಿ, ಕೇಸ್ ವರ್ಕರ್ ಮುದ್ದಿ, ರವಿ ಕುರುಬೆಟ್ಟ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣದಲ್ಲಿ ಶಾಮೀಲಾದ ಸಂಬಂಧಿಗಳಾದ ತುಕಾರಾಮ್ ಪೂಜಾರ್, ಕರಿಯಪ್ಪ ಪೂಜಾರ್, ರಾಮಪ್ಪ ಪೂಜಾರ್, ಫಕ್ಕಿರಪ್ಪ ಪೂಜಾರ್ ವಿರುದ್ಧವೂ ದೂರು ನೀಡಿದ್ದಾರೆ. 9 ಅಧಿಕಾರಿಗಳು ಸೇರಿದಂತೆ 13 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...