Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಉಡುಗೆ ಬಗ್ಗೆ ವ್ಯಂಗ್ಯವಾಡಿದವನ ವಿರುದ್ಧ ಎಫ್ಐಆರ್..!

Facebook
Twitter
Telegram
WhatsApp

ಶಿಲ್ಲಾಂಗ್: ಪ್ರಧಾನಿ ನರೇಂದ್ರ ಮೋದಿ ಹೋದ ಕಡೆಯಲ್ಲೆಲ್ಲಾ ಅಲ್ಲಿನ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳಲು ಯತ್ನಿಸುತ್ತಾರೆ. ಅಲ್ಲಿನ ಉಡುಗೆ – ತೊಡುಗೆಗಳನ್ನೇ ತೊಡುತ್ತಾರೆ. ಇತ್ತೇಚೆಗೆ ಶಿಲ್ಲಾಂಗ್ ಗೆ ಭೇಟಿ ನೀಡಿ, ಹಲವು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಅಲ್ಲಿನ ವಿಶೇಷ ಉಡುಪನ್ನು ಧರಿಸಿದ್ದರು. ಈ ಸಾಂಪ್ರದಾಯಿಕ ಖಾಸಿ ಉಡುಪಿನ ಬಗ್ಗೆ ಮಾಜಿ ಕ್ರಿಕೆಟಿಗ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್ ವ್ಯಂಗ್ಯವಾಡಿದ್ದರು.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಕೀರ್ತಿ ಆಜಾದ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಧಾನಿ ಮೋದಿ ಅವರು ತೊಟ್ಟಿದ್ದ ಖಾಸಿ ಉಡಿಗೆಯ ಫೋಟೋವನ್ನು ಟ್ವೀಟ್ ಮಾಡಿ, ಇದು ಮಹಿಳೆಯರು ತೊಡುವ ಉಡುಗೆ. ಗಂಡು ಅಲ್ಲ, ಹೆಣ್ಣು ಅಲ್ಲ. ಫ್ಯಾಷನ್ ನ ಆರಾಧಕ ಮಾತ್ರ ಎಂದು ಬರೆದಿದ್ದರು. ಕೀರ್ತಿ ಆಜಾದ್ ಪೋಸ್ಟ್ ಗೆ ಸಿಕ್ಕಾಪಟ್ಟೆ ಆಕ್ರೋಶ ವ್ಯಕ್ತವಾಗಿತ್ತು.

ಬಳಿಕ ಅದನ್ನು ಸಮರ್ಥನೆ ಮಾಡಿಕೊಂಡಿದ್ದ ಕೀರ್ತಿ ಆಜಾದ್, ನಾನು ಉಡುಪಿನ ಬಗ್ಗೆ ಹೇಳಿದ್ದಲ್ಲ. ನನಗೆ ಉಡುಪಿಗೆ ಅಗೌರವಿಸುವ ಉದ್ದೇಶ ನನಗಿರಲಿಲ್ಲ. ಮೋದಿಯವರ ಫ್ಯಾಷನ್ ಬಗ್ಗೆ ಹೇಳಲು ಬಯಸಿದ್ದೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದಿದ್ದರು. ಇದೀಗ ಅವರ ಮೇಲೆ ಸದಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!