ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು

1 Min Read

 

ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧ ಅವಹೇಳನಕಾರಿ  ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳಲ್ಲ. ಗಾಂಧಿ ಪಾಕಿಸ್ತಾನಕ್ಕೆ ರಾಷ್ಟ್ರಪಿತ ಹಾಗೂ ಜವಾಹರ್ಲಾಲ್ ನೆಹರೂರನ್ನ ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಫಾರೂಕ್ ಅಬ್ದುಲ್ಲಗೆ ಜವಾಹರಲಾಲ್ ನೆಹರುಗೆ ಲಿಂಕ್ ಇತ್ತು. ಅದಕ್ಕೆ ರಾಹುಲ್ ಗಾಂಧಿ ಮತ್ತು ಓಮರ್ ಅಬ್ದುಲ್ಲ ಒಂದೇ ತರಹ ಇದ್ದಾರೆ.

ಇವರೆಲ್ಲರೂ ದೇಶದ ಸ್ವತಂತ್ರಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೊಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧೀ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವತಂತ್ರ ಸಿಕ್ಕಿತ? ನಾನು ಚರಕ ತಿರುಗಿಸುತ್ತೇನೆ ನಾಳೆ ರಾಜ್ಯದ ಸಿಎಂ ಆಗುತ್ತೇನ? ಎಂದು ಯತ್ನಾಳ ಪ್ರಶ್ನಿಸಿದ್ದರು.

ಗುರುಮಠಕಲ್ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 196: ವಿವಿಧ ಗುಂಪುಗಳ ನಡುವೆ ದ್ವೇಷ ಉಂಟುಮಾಡುವುದು. ಸೆಕ್ಷನ್ 299: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು. ಸೆಕ್ಷನ್ 302, 352, 353: ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಇತರ ಕೃತ್ಯಗಳು.ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Share This Article
Enable Notifications OK No thanks