ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಮೇಲೆ ಎಫ್ಐಆರ್ ದಾಖಲು ; ಕಾರಣವೇನು..?

ಸೋಷಿಯಲ್ ಮೀಡಿಯಾ ದೊಡ್ಡಮಟ್ಟಕ್ಕೆ ರೀಚ್ ಆಗುವುದಕ್ಕೆ ಶುರುವಾದ ಮೇಲಂತು ವೀವ್ಸ್ ಗಾಗಿ ಜನ ಏನೇನೋ ಮಾಡುವುದಕ್ಕೆ ಶುರು ಮಾಡಿದ್ದಾರೆ. ಜಸ್ಟ್ ಮನರಂಜನೆಗಾಗಿ ಕೆಲವೊಂದು ಸಲ ಕಾನೂನನ್ನು ಮೀರುತ್ತಾರೆ. ನೋಡುಗರಿಗೂ ತಪ್ಪು ಸಂದೇಶವನ್ನ ನೀಡುತ್ತಾರೆ. ಇದೀಗ ಅಂಥದ್ದೇ ಕಾರಣಕ್ಕೆ ವಿನಯ್ ಗೌಡ ಹಾಗೂ ರಜತ್ ಕಿಶನ್ ವಿರುದ್ಧ ದೂರು ದಾಖಲಾಗಿದೆ.

 

ಇತ್ತೀಚೆಗೆ ವಿನಯ್ ಗೌಡ ಹಾಗೂ ರಜತ್ ಕಿಶನ್ ಸ್ಟೈಲ್ ಆಗಿ ವಿಡಿಯೋವೊಂದನ್ನ ಮಾಡಿದ್ದರು. ಇಬ್ಬರು ಒಳ್ಳೆ ಗತ್ತಿನಲ್ಲಿ ಬಂದು ವಿಡಿಯೋಗೆ ಪೋಸ್ ನೀಡಿದ್ದರು. ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಕೈಯಲ್ಲಿಂದು ಲಾಂಗ್ ಹಿಡಿದು ಬೀಸುತ್ತಾ ವಿಡಿಯೋ ಮಾಡಿದ್ದರು. ಇದರಲ್ಲಿ ನಟ ದರ್ಶನ್ ಅವರ ಮೆಜೆಸ್ಟಿಕ್ ಹಾಡಿಗೆ ಸ್ಲೋ ಮೋಷನ್ ನಲ್ಲಿ ವಿಡಿಯೋ ಮಾಡಿದ್ದರು. ಈ ವಿಡಿಯೋ ನೋಡಿದವರಿಗೆ ಭಯದ ವಾತಾವರಣವೇ ಮೂಡಿತ್ತು. ಹೀಗಾಗಿ ಒದರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಬಸವೇಶ್ವರ ನಗರ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಸದ್ಯದಲ್ಲಿಯೇ ತನಿಖೆಗೆ ಆರೋಪಿಗಳನ್ನು ಕರೆಸಿಕೊಂಡು ವಿಚಾರಣೆ ನಡೆಸಲಿದ್ದಾರೆ. ಈ ವಿಡಿಯೋ ನೋಡಿದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಸೆಲೆಬ್ರೆಟಿಯಾಗಿ, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನ ಫಾಲೋವರ್ಸ್ ನ ಇಟ್ಟುಕೊಂಡು ಈ ರೀತಿಯಾದ ರೀಲ್ಸ್ ಮಾಡೋದು ಎಷ್ಟು ಸರಿ‌. ಪ್ರಚೋದನೆ ಕೊಟ್ಟಂತೆ ಆಗುವುದಿಲ್ಲವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಪೊಲೀಸರು ಅವರಿಬ್ಬರ ಮೇಲೂ ಕೇಸ್ ದಾಖಲಿಸಿದ್ದಾರೆ. ಕೇಸ್ ರಿಜಿಸ್ಟರ್ ಆಗುತ್ತಿದ್ದಂತೆ ರಜತ್ ವಿಡಿಯೋ ಡಿಲೀಟ್ ಮಾಡಿದ್ದಾರೆ.

suddionenews

Recent Posts

ಯುರಿನ್ ಇನ್ಫೆಕ್ಷನ್ ಆಗಿದ್ಯಾ..? ಈ ಮನೆ ಮದ್ದನ್ನ ಟ್ರೈ ಮಾಡಿ

ಸಾಮಾನ್ಯವಾಗಿ ಸಾಕಷ್ಟು ಜನರಿಗೆ ಯುರಿನ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತದೆ. ಪಬ್ಲಿಕ್ ಟಾಯ್ಲೆಟ್ ಬಳಸಿದಾಗ ಅಥವಾ ಸ್ವಚ್ಚತೆ ಇಲ್ಲದ ವಾಶ್ ರೂಮ್…

3 hours ago

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…

5 hours ago

ನಾಳೆಯಿಂದ ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊಳಲ್ಕೆರೆ ಸಜ್ಜು

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…

13 hours ago

ನಾಳೆ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ

    ಚಿತ್ರದುರ್ಗ. ಮಾರ್ಚ್26 :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…

13 hours ago

ನಾಗರಾಜ್ ಅವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ಪ್ರದಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

13 hours ago

6 ವರ್ಷಗಳ ಕಾಲ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

  ಸುದ್ದಿಒನ್, ಬೆಂಗಳೂರು, ಮಾರ್ಚ್. 26 :  ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…

16 hours ago