Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಬೆಂಕಿ : ಹಲವು ದಾಖಲೆಗಳು ಬೆಂಕಿಗಾಹುತಿ…!

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 07 : ಜಿಲ್ಲಾಧಿಕಾರಿಯ ಕಚೇರಿಯ ಆವರಣದಲ್ಲಿರುವ ಹಲವು ದಾಖಲೆಗಳನ್ನು ಇಟ್ಟಿದ್ದ ತಗಡಿನಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ  ಘಟನೆ ಇಂದು ಬೆಳಿಗ್ಗೆ 11 : 30 ರ ಸುಮಾರಿಗೆ ನಡೆದಿದೆ. ಈ ವೇಳೆ ಬೆಂಕಿಗೆ ಹಲವು ದಾಖಲೆಗಳು ನಾಶವಾಗಿವೆ. ವಿಷಯ ತಿಳಿಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಅಷ್ಟರೊಳಗೆ ಸಾಕಷ್ಟು ದಾಖಲೆಗಳು ಸುಟ್ಟು ಕರಕಲಾಗಿದ್ದವು. ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ ಸಾಕಷ್ಟು ಶ್ರಮ ಹಾಕಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಅವಘಡದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ತಿಳಿಗೊಳಿಸುವುದಕ್ಕೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.ಬೆಂಕಿಯ ಅವಘಡ ಸಂಭವಿಸಿದಾಗ ಯಾರಿಗೂ ಯಾವುದೇ ಪ್ರಾಣಾಯಾಮವಾಗಿಲ್ಲ. ಆದರೆ ಬೆಂಕಿ ಹೊತ್ತಿದ ರೀತಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಸಕ್ಕೆ ಹಾಕಿದ್ದ ಬೆಂಕಿ ಹರಡಿದ್ದೇಗೆ..? ಅದರಲ್ಲೂ ದಾಖಲೆಗಳನ್ನು ಸಂಗ್ರಹಿಸಿಟ್ಟ ಕೋಣೆಗೆ ಅಷ್ಟೊಂದು ಬೆಂಕಿ ಹತ್ತುವುದು ಅಂದರೆ ಏನು..? ಹೀಗೆ ನೂರೆಂಟು ಅನುಮಾನಗಳು ಕಾಡುವುದಕ್ಕೆ ಶುರುವಾಗಿದೆ. ಈ ಬೆಂಕಿ ಹೊತ್ತಿರುವ ಕಾರಣ ದಾಖಲೆಗಳು ಸುಟ್ಟು ಹೋಗಿವೆ. ತನಿಖೆಯ ಬಳಿಕವಷ್ಟೇ ಬೆಂಕಿ ಹತ್ತಿದ್ದೇಗೆ ಎಂಬ ಸತ್ಯ ತಿಳಿಯಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment