ಸುದ್ದಿಒನ್, ಚಿತ್ರದುರ್ಗ, ಜು.02: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಗುರುವಾರ ನಗರದ ಕೈಗಾರಿಕಾ ಪ್ರದೇಶದ ಖಾಧಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆ ಆಯೋಗದ ಕೇಂದ್ರೀಯ ಸಿಲ್ವರ್ ಪ್ಲಾಂಟ್ನಲ್ಲಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ ನಡೆಸಲಾಯಿತು.
ಈ ವೇಳೆ ಕೈಗಾರಿಕೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಸ್ಪಂದನೆ ಕಾರ್ಯಗಳು, ಕೈಗಾರಿಕೆಗಳಲ್ಲಿರುವ ಅಗ್ನಿಶಾಮಕ ಉಪಕರಣಗಳ ಬಳಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯೊಂದಿಗೆ ಹೇಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕರಿಗೆ ತರಬೇತಿ ನೀಡಲಾಯಿತು.
ಅಗ್ನಿ ದುರಂತದಲ್ಲಿ ಸಿಲುಕಿದ ಗಾಯಾಳುಗಳ ರಕ್ಷಣೆ ಹಾಗೂ ಪ್ರಥಮ ಚಿಕಿತ್ಸಾ ಕಾರ್ಯಗಳ ಬಗ್ಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಎಸ್.ಡಿ.ಆರ್.ಎಫ್ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಅಣಕು ಪ್ರದರ್ಶನ ನೀಡಲಾಯಿತು.
ಈ ವೇಳೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವ್ಹಿ ಅಗಡಿ, ಅಗ್ನಿಶಾಮಕ ಠಾಣಾಧಿಕಾರಿ ನರೇಂದ್ರ, ಎಸ್.ಡಿ.ಆರ್.ಎಫ್ ಸಬ್ ಇನ್ಸಪೆಕ್ಟರ್ ಇಮ್ರಾನ್ ಖುರೇಶಿ, ಖಾಧಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆ ಆಯೋಗದ ಕೇಂದ್ರೀಯ ಸಿಲ್ವರ್ ಪ್ಲಾಂಟ್ನ ಮಾಲತಿ ಮತ್ತು ಶಶಿಕಲ ಹಾಗೂ ಕಾರ್ಮಿಕರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








