Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಿರುಪತಿಯಲ್ಲಿ ರಾಜ್ಯದ ಗಣ್ಯರಿಗೆ ಮೊದಲ ಆರತಿ: ಸಿಎಂ ಡಿ.ಕೆ ಶಿವಕುಮಾರ್

---Advertisement---

ಬೆಂಗಳೂರು.ಜುಲೈ.13: ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯಲ್ಲಿ ನೆರವೇರುವ ದಿನದ ಮೊದಲ ಆರತಿ ಸೇವೆಯಲ್ಲಿ ಇನ್ಮುಂದೆ ಕರ್ನಾಟಕದ ಗಣ್ಯರಿಗೂ ಆದ್ಯತೆ ಸಿಗಲಿದೆ.

ರಾಜ್ಯದ ಜನಪ್ರತಿನಿಧಿಗಳು ಹಾಗೂ ವಿವಿಐಪಿಗಳಿಗೆ ಶಿಷ್ಟಾಚಾರದ ಪ್ರಕಾರ ಮೊದಲ ಆರತಿ ಗೌರವ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.

ನಗರದ ಬನಶಂಕರಿ 6ನೇ ಹಂತದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಷಣ್ಮುಖ ಸುಬ್ರಮಣ್ಯ ಸ್ವಾಮಿ ದೇವಾಲಯದ ಭವ್ಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕರ್ನಾಟಕದ ಪ್ರಮುಖರಿಗೆ ಈ ವಿಶೇಷ ಸೌಲಭ್ಯ ಕಲ್ಪಿಸುವ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ, ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಅಧಿಕೃತ ನಿಯಮಾವಳಿಗಳನ್ನು ಪ್ರಕಟಿಸಲಾಗುವುದು ಎಂದು ಸಿಎಂ ಈ ಸಂದರ್ಭದಲ್ಲಿ ಭರವಸೆ ನೀಡಿದರು.

ತಿರುಮಲ ವೆಂಕಟೇಶ್ವರ ದೇವಾಲಯದ ಒಳ ಮುಖ್ಯ ದ್ವಾರದ ಬಳಿ ತೆರಳಿ ಪೂಜೆ ಮಾಡಲು ಕರ್ನಾಟಕದ ಮುಖ್ಯಮಂತ್ರಿ ಅವರಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ನಮ್ಮ ರಾಜ್ಯ ಸರ್ಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರ್ಕಾರದ ಪರ ಯಾರೇ ತಿರುಪತಿಗೆ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Join WhatsApp

Join Now

Join Telegram

Join Now