Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಧಿವೇಶನದ ಮೊದಲ ದಿನ : ಏನೆಲ್ಲಾ ಚರ್ಚೆ ಆಯ್ತು, ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರ ವಗ್ವಾದ ಹೇಗಿತ್ತು..?

---Advertisement---

ಬೆಂಗಳೂರು: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದೆ. ವಿಧಾನಸೌಧದಲ್ಲಿ ಅಧಿವೇಶನ ನಡೆದಿದ್ದು, ಮೊದಲೇ ಸಿದ್ಧಗೊಂಡಂತೆ ವಿರೋಧ ಪಲ್ಷದ ನಾಯಕರು ಹಗರಣಗಳ ವಿಚಾರವನ್ನು ತೆಗೆದು ಚರ್ಚೆ ನಡೆಸಿದರು‌. ಆಡಳಿತ ಪಕ್ಷದ ಮೇಲೆ ಗದಾಪ್ರಹಾರ ಮಾಡಿದರು. ಇದರ ನಡುವೆ ವಿರೋಧ ಪಕ್ಷದ ನಾಯಕರಿಗೆ ಎಲ್ಲದಕ್ಕೂ ಉತ್ತರ ಕೊಡಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ರೆಡಿಯಾಗಿಯೇ ಬಂದಿದ್ದರು. ಆದರೂ ಚರ್ಚೆಗಳು ಅಷ್ಟು ಆರೋಗ್ಯಕರವಾಗಿ ನಡೆಯಲಿಲ್ಲ.

ಚರ್ಚೆಯ ವೇಳೆ ವಿಪಕ್ಷ ನಾಯಕ ಆರ್ ಅಶೋಕ್, ಚರ್ಚೆಯನ್ನು ನಾಳೆ ಮುಂದುವರೆಸುತ್ತೇನೆ ಎಂದರು. ಅದಕ್ಕೆ ಉತ್ತರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನಾಳೆ ಯಾಕೆ..? ಇಂದೇ ಕೇಳಿ ಏನೇ ಇದ್ದರು ಅದಕ್ಕೆಲ್ಲ ಉತ್ತರಿಸಲು ನಾವೂ ತಯಾರಿದ್ದೇವೆ. ಚರ್ಚೆಯನ್ನು ಇವತ್ತೇ ಮುಗಿಸಿಬಿಡಿ ಎಂದರು. ಬಳಿಕ ಸ್ಪೀಕರ್ ಯುಟಿ ಖಾದರ್ ಮಧ್ಯ ಪ್ರವೇಶ ಮಾಡಿ, ನಾಳೆ ನಿಮಗೆ ಎಷ್ಟು ಸಮಯ ಬೇಕು ಎಂದು ಕೇಳಿದಾಗ ಅರ್ಧ ಗಂಟೆ ಎಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ಹಗರಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳ ಕುರಿತು ವಿಪಕ್ಷ ನಾಯಕರು ಆಡಳಿತ ಪಕ್ಷದ ಮೇಲೆ ಮುಗಿ ಬಿದ್ದವು. ಆರ್.ಅಶೋಕ್, ಬೆಲ್ಲದ್, ಅಶ್ವತ್ಥ್ ನಾರಾಯಣ್, ಸುನೀಲ್ ಕುಮಾರ್ ಹಗರಣಗಳ ವಿಚಾರದಲ್ಲಿ ಚರ್ಚೆ ಮಾಡಲು ಅವಕಾಶ ಕೇಳಿದರು‌ ಅಷ್ಟರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎದ್ದು ನಿಂತು, ಯಾವುದೇ ವಿಷಯದ ಮೇಲಿನ ಚರ್ಚೆಯನ್ನು ಹಿಂತೆಗೆಯುವುದಿಲ್ಲ. ಏನೇ ಪ್ರಶ್ನೆ ಕೇಳಿದರು ಅದಕ್ಕೆ ಉತ್ತರಿಸುತ್ತೇವೆ ಎಂದರು.

ಇದೇ ವೇಳೆ ವಾಲ್ಮೀಕಿ ಹಗರಣವನ್ನು ಎಸ್ಐಟಿ ತನಿಖೆ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್, ಈ ತನಿಖೆಯನ್ನು ಸಿಬಿಐಗೆ ವಹಿಸಿ ಎಂದೇ ಒತ್ತಾಯಿಸಿದರು. ಹೀಗೆ ಅಧಿವೇಶನದ ಮೊದಲ ದಿನ ಹಗರಗಳ ವಿಚಾರವೇ ಚರ್ಚೆ ನಡೆದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment