Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತಿಹಾಸದಲ್ಲಿಯೇ ಮೊದಲು : ಮಂಡ್ಯದ ಶ್ರೀರಂಗನ ದೇವಾಸ್ಥಾನದಲ್ಲಿ ದೀಪೋತ್ಸವ ರದ್ದು..!

Facebook
Twitter
Telegram
WhatsApp

ಮಂಡ್ಯ: ಕೊರೊನಾ ಸಂಕಷ್ಟದಿಂದ ಕೆಲವೊಂದು ಧಾರ್ಮಿಕ ಪದ್ಧತಿಗಳಿಗೂ ಬ್ರೇಕ್ ಬಿದ್ದಿದೆ. ಕೊರೊನಾ ನಿಯಂತ್ರಿಸೋಕೆ ರಾಜ್ಯ ಸರ್ಕಾರ ಈಗಾಗ್ಲೇ ಟಫ್ ರೂಲ್ಸ್ ಜಾರಿ ಮಾಡಿದ್ದು, ಜೊತೆಗೆ ವೀಕೆಂಡ್ ಲಾಕ್ಡೌನ್ ಹೇರಿದೆ.

ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀರಂಗನ ದೇವಾಲಯದಲ್ಲಿ ನಡೆಯಬೇಕಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ವೀಕೆಂಡ್ ಕರ್ಫ್ಯೂ ಅಡ್ಡಿಯುಂಟು ಮಾಡಿದೆ. ಸಂಕ್ರಾಂತಿಯಂದು ನಡೆಯಬೇಕಿದ್ದ ಈ ದೀಪೋತ್ಸವ ಕಾರ್ಯಕ್ರಮ ವೀಕೆಂಡ್ ಕರ್ಫ್ಯೂ ಹಿನ್ನೆಲೆ ರದ್ದಾಗಿದೆ.

ಸಂಕ್ರಾಂತಿ ಹಬ್ಬದಂದು ಇಲ್ಲಿ ದೀಪೋತ್ಸವ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿತ್ತು. ಈ ದೀಪೋತ್ಸವ ಕಾರ್ಯಕ್ರಮಕ್ಕೆ ಸಹಸ್ರಾರು ಭಕ್ತರು ಪಾಲ್ಗೊಳ್ಳುತ್ತಿದ್ದರು. ಆದ್ರೆ ವೀಕೆಂಡ್ ಕರ್ಫ್ಯೂ ಹಿನ್ನೆಲೆ ದೇವಸ್ಥಾನದಲ್ಲಿ ಅದ್ದೂರಿ ಪೂಜೆಗೆ, ಹೆಚ್ಚು ಭಕ್ತರಿಗೆ ಅವಕಾಶ ನೀಡಿಲ್ಲ. ಸರಳವಾಗಿ ಸಾವಿರ ದೀಪಗಳನ್ನ ಹಚ್ಚಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ. ಇನ್ನು ಭಕ್ತರೆಲ್ಲಾ ದೇವಸ್ಥಾನದ ಹೊರಗಿನ ಆವರಣದಲ್ಲೇ ಪೂಜೆ ಸಲ್ಲಿಸಿ ವಾಪಾಸ್ ಆಗಿದ್ದಾರೆ. ದೇವಸ್ಥಾನದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಲಕ್ಷ ದೀಪೋತ್ಸವ ಕಾರ್ಯಕ್ರಮ ರದ್ದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!