ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಏ.19): ಜಿಲ್ಲಾಧಿಕಾರಿಗಳ ಆದೇಶದಂತೆ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಹೊಸದುರ್ಗ ಮತಕ್ಷೇತ್ರದ ಕಾರ್ಯಗಳಿಗೆ ನಿಯೋಜನೆಗೊಂಡ ಎಲ್ಲಾ ಹಂತದ ಮತದಾನ ಅಧಿಕಾರಿಗಳಿಗೆ ಏ.21 ರಂದು, ಹೊಸದುರ್ಗ ನಗರದ ಶ್ರೀಮತಿ ತಾಯಮ್ಮ ಶ್ರೀ ಎಡತೊರೆ ಸಿದ್ದಿವಾಲ್ ಲಿಂಗಯ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ, ಬೆಳಿಗ್ಗೆ 10:30 ರಿಂದ ಮೊದಲ ಹಂತದ ತರಬೇತಿ ಕಾರ್ಯ ಹಮ್ಮಿಕೊಳ್ಳಲಾಗಿದೆ.
ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ತಪ್ಪದೇ ತರಬೇತಿ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಚುನಾವಣಾಧಿಕಾರಿ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












