Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದು ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಒಬಿಸಿ ಟೀಂನ ಮೊದಲ ಸಭೆ ..!

---Advertisement---

ರಾಜ್ಯದಲ್ಲಿ ಅಹಿಂದ ನಾಯಕ ಎಂದೇ ಕರೆಸಿಕೊಳ್ಳುವ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಒಬಿಸಿ ಸಭೆ ನಡೆಯುತ್ತಿದೆ. ಎಐಸಿಸಿ ಮಟ್ಟದಲ್ಲಿ ಒಬಿಸಿ ನಾಯಕ ಸ್ಥಾನ ಪಡೆದ ಮೇಲೆ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಈ ಸಭೆಯ ಪ್ರಮುಖ ಉದ್ದೇಶ, ಹಿಂದುಳಿದ ವರ್ಗಗಳನ್ನು ಒಟ್ಟುಗೂಡಿಸಿ, ಸಮಸ್ಯೆಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳಲು ಹೋರಾಟ ರೂಪಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.

ಬಹಳ ಮುಖ್ಯವಾಗಿ 2029ರ ಚುನಾವಣೆಯ ಮೇಲೂ ಕಾಂಗ್ರೆಸ್ ಗಮನ ಹರಿಸಿದ್ದು, ಅಲ್ಲಿ ಹಿಂದುಳಿದ ಸಮುದಾಯದ ಮತಗಳನ್ನು ಸೆಳೆಯುವುದಕ್ಕೆ ಈಗಿನಿಂದಲೇ ಪ್ಲ್ಯಾನ್ ರೂಪಿಸಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಸಭೆ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿಯೇ ಈ ಸಭೆ ನಡೆದಿದ್ದು, ಸಭೆ ಬಳಿಕ ಎಲ್ಲಾ ನಾಯಕರು ಫೋಟೋಗೆ ಪೋಸ್ ಕೂಡ ನೀಡಿದ್ದಾರೆ.

ಸಭೆ ಬಳಿಕ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಅಹಿಂದ ಒಂದು ಮತ ಬ್ಯಾಂಕ್ ಅಲ್ಲ. ಇದು ಭಾರತದ ಆತ್ಮಸಾಕ್ಷಿಯ ಧ್ವನಿ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮತ್ತು ಸರ್ವೋದಯ ತತ್ವದಲ್ಲಿ, ಯಾರೂ ಹಿಂದೆ ಉಳಿಯದ, ಎಲ್ಲರೂ ಒಟ್ಟಿಗೆ ಏಳುವ ಭಾರತವನ್ನು ಕಟ್ಟೋಣಾ ಎಂದು ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಈ ಸಭೆಗೆ ಐವರು ಸಚಿವರಿಗೂ ಅವಕಾಶ ಸಿಕ್ಕಿದೆ. ಸಚಿವ ಮಧು ಬಂಗಾರಪ್ಪ, ಸಂತೋಷ್ ಲಾಡ್, ಮಂಕಾಳ್ ವೈದ್ಯ, ಭೈರತಿ ಸುರೇಶ್, ಎನ್ ಎಸ್ ಬೋಸರಾಜು ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. 90 ಕ್ಕೂ ಹೆಚ್ಚು ರಾಷ್ಟ್ರೀಯ ನಾಯಕರಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಸಭೆಯಲ್ಲಿ ಹಲವು ನಿರ್ಣಯಗಳನ್ನ ಕೈಗೊಳ್ಳಲಾಗುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment