ಹೇಮಾವತಿ ಕುವೆಂಪು ಬಿ.ಇಡಿ ಕಾಲೇಜಿನ ಪ್ರಶಿಕ್ಷಣಾರ್ಥಿ ಎನ್.ವೈ.ಶ್ರೀಲತಾಗೆ ಪ್ರಥಮ ರ್ಯಾಂಕ್

suddionenews
0 Min Read

ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯದ 2021ರ ಜುಲೈನಲ್ಲಿ ನಡೆದ ಬಿ.ಇಡಿ ಪರೀಕ್ಷೆಯಲ್ಲಿ ಚಿತ್ರದುರ್ಗ ನಗರದ ಕೋಟೆ ಮುಂಭಾಗದ ಶ್ರೀಮತಿ ಹೇಮಾವತಿ ಕುವೆಂಪು ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100ರಷ್ಟು ಫಲಿತಾಂಶ ಲಭಿಸಿದೆ.

ಪ್ರಶಿಕ್ಷಣಾರ್ಥಿ ಎನ್.ವೈ.ಶ್ರೀಲತಾ ಅವರು ಬಿ.ಇಡಿ ಪದವಿಯಲ್ಲಿ ಪ್ರಥಮ ರ್ಯಾಂಕ್‍ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಶ್ರೀಮತಿ ಹೇಮಾಮತಿ ಕುವೆಂಪು ಶಿಕ್ಷಣ ಮಹಾವಿದ್ಯಾಲಯಕ್ಕೆ ಉತ್ತಮ ಫಲಿತಾಂಶ ತಂದಂತಹ ಎಲ್ಲ ಶಿಕ್ಷಣಾರ್ಥಿಗಳಿಗೆ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳಾದ ಎಸ್. ಸಂದೀಪ್, ವೈ.ಬಿ.ದಿವ್ಯ ಸರಸ್ವತಿ ಹಾಗೂ ಆಡಳಿತಾಧಿಕಾರಿ ಎಸ್.ಸಾಗರ್, ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಸಯ್ಯ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *