ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಇದೇ ತಿಂಗಳ 16 ರಂದು ಚಂದ್ರಗ್ರಹಣ ಸಂಭವಿಸಿತ್ತು. ಆದರೆ ಭಾರತದಲ್ಲಿ ಹಗಲಿನಲ್ಲಿ ಇದ್ದುದರಿಂದ ಗೋಚರಿಸಿರಲಿಲ್ಲ. ಇದೀಗ 29 ರಂದು ಸಂಜೆ 4.25 ರಿಂದ 30 ರ ಮಧ್ಯಾಹ್ನದವರೆಗೂ ಸೂರ್ಯಗ್ರಹಣ ಸಂಭವಿಸುತ್ತದೆ. ಆದರೆ ಈ ಗ್ರಹಣವೂ ಸಹಾ ಭಾರತದಲ್ಲಿ ಎಲ್ಲಿಯೂ ಗೋಚರಿಸುವುದಿಲ್ಲ.
ಉತ್ತರ ಮತ್ತು ಪೂರ್ವ ಅಮೆರಿಕಾ, ಕೆನಡಾ, ಆಫ್ರಿಕಾ, ಯುರೋಪ್ ಖಂಡದ ಕೆಲವು ಭಾಗಗಳಲ್ಲಿ ಭಾಗಶಃ ಸೂರ್ಯಗ್ರಹಣವನ್ನು ಅವರು ನೋಡಬಹುದಾಗಿದೆ. ಆದರೂ ನಮ್ಮ ದೇಶದ ಜನರಲ್ಲಿ ಗ್ರಹಣದ ಪರಿಕಲ್ಪನೆ ಬೇರೆಯೇ ಇರುತ್ತದೆ. ಗ್ರಹಣ ಎಂಬುದು ಆಕಾಶದಲ್ಲಿ ನಡೆಯುವ ನೆರಳು ಬೆಳಕಿನ ಆಟವಷ್ಟೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ, ಅವು ಒಂದೇ ಸಮತಲದಲ್ಲಿ ಇದ್ದಾಗ ಮಾತ್ರ ಸೂರ್ಯಗ್ರಹಣ ಸಂಭವಿಸಲು ಸಾಧ್ಯ. ಅನೇಕ ಗಂಟೆಗಳ ಕಾಲ ಚಂದ್ರ ಸೂರ್ಯನನ್ನು 85 ರಷ್ಟು ಮರೆಮಾಡಿರುತ್ತಾನೆ. ಹಾಗಾಗಿ ಭಾಗಶಃ ಸೂರ್ಯಗ್ರಹಣವನ್ನು ನೋಡಬಹುದಾಗಿದೆ. ಇದರಿಂದ ಯಾವುದೇ ರೀತಿಯ ಭಯ, ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿಯರಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲ. ಪಶು ಪಕ್ಷಿಗಳ ಮೇಲೆಯೂ ಯಾವುದೇ ಪರಿಣಾಮವಿಲ್ಲ ಎಂದು ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಹೃದಯ ಭಾಗದಲ್ಲಿರುವ ಬಿ.ಡಿ. ರಸ್ತೆಯ ಎಸ್.ಬಿ.ಐ. ಬ್ಯಾಂಕ್ ಸಮೀಪ, ಶಾರ್ಟ್ ಸರ್ಕ್ಯೂಟ್…
ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲು ವಾಸ ಅನಿಭವಿಸುತ್ತಿದ್ದಾರೆ. ಇದರ ನಡುವೆ ತನಿಖೆಯು ನಡೆಯುತ್ತಿದ್ದು, ಗೌರವ…
ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ ಇದೆ.…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…
ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…
ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…