ತಿಹಾರ್ ಜೈಲಿನಲ್ಲಿ ಸಾವಿನ ಸಂಖ್ಯೆ ಹೆಚ್ಚಳ ತನಿಖೆಗೆ ಆದೇಶ..!

ನವದೆಹಲಿ: ತಿಹಾರ್ ಜೈಲಿನಲ್ಲಿ ಸಾವನ್ನಪ್ಪುತ್ತಿರುವ ಕೈದಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಎಂಟು ದಿನದಲ್ಲೇ ಐವರು ಕೈದಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಬಗ್ಗೆ ಮೇಲಾಧಿಕಾರಿಗಳು ತನಿಖೆಗೆ ಆದೇಶ ನೀಡಿದ್ದಾರೆ.

ಜೈಲಿನ ಸಂಖ್ಯೆ 3ರಲ್ಲಿರುವ ಕೈದಿ ಕೂಡ ಶುಕ್ರವಾರ ಸಾವನ್ನಪ್ಪಿದ್ದಾನೆ. ಆತ ತನ್ನ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನಂತೆ. ತಕ್ಷಣ ಆತನನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಆತ ಬದುಕುಳಿದಿಲ್ಲ. ವಿಕ್ರಮ್ ಅಲಿಯಾಸ್ ವಿಕ್ಕಿ ಸಾವನ್ನಪ್ಪಿದ ಕೈದಿಯಾಗಿದ್ದಾನೆ. ವೈದ್ಯರು ಪರೀಕ್ಷಿಸಿದಾಗ ಆತ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದಾನೆ ಎಂದಿದ್ದಾರೆ.

ಎಲ್ಲರ ಸಾವು ಸಹಜ ಸಾವಿನ ರೀತಿಯೇ ಕಂಡರೂ ಅಲ್ಲಿನ ಅಧಿಕಾರಿಗಳು ತನಿಖೆಗೆ ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಗೋಯೆಲ್, ಕೈದಿಗಳ ಮೇಲೆ ಯಾವುದೇ ಹಲ್ಲೆಗಳನ್ನು ಮಾಡಲಾಗಿಲ್ಲ. ಅವರಿಗೆ ಎಲ್ಲಾ ರೀತಿಯ ಭದ್ರತೆಯನ್ನು ನೀಡಲಾಗಿದೆ. ಅವರಿಗೆ ಅನಾರೋಗ್ಯ ಇದ್ದ ಕಾರಣ ಸಾವನ್ನಪ್ಪಿದ್ದಾರೆ. ವೈದ್ಯರು ಕೂಡ ಅದನ್ನ ಪ್ರೂವ್ ಮಾಡಿದ್ದಾರೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *