ಚಿತ್ರದುರ್ಗ ಬಿಜೆಪಿ ಕಚೇರಿಯಲ್ಲಿ ಐವರು ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮಾ. 10 : ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದವತಿಯಿಂದ ಇತ್ತೀಚೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಐದು ಜನ ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನವನ್ನು ಮಾಡಲಾಯಿತು.

 

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಎ.ಮುರಳಿ ಇತ್ತಿಚಿನ ದಿನದಲ್ಲಿ ಮಹಿಳೆಯರು ಎಲ್ಲದರಲ್ಲೂ ಸಹಾ ಸಾಧನೆಯನ್ನು ಮಾಡುತ್ತಿದ್ದಾರೆ. ಪುರುಷರಂತೆ ಅವರು ಸಹಾ ಸರಿಸಮನಾದ ರೀತಿಯಲ್ಲಿ ಬದುಕುತ್ತಿದ್ದಾರೆ. ಎಲ್ಲಾ ಕೆಲಸಗಳಲ್ಲಿಯೂ ಸಹಾ ಮಹಿಳೆಯರು ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಮನೆ ಕೆಲಸದಿಂದ ಹಿಡಿದು ಕಚೇರಿಯ ಕೆಲಸದಲ್ಲಿಯೂ ಸಹಾ ಮಹಿಳೆಯರು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಿದ್ದಾರೆ. ಇಂತಹ ಮಹಿಳೆಯನ್ನು ನಾವುಗಳು ಗೌರವಿಸಬೇಕಿದೆ. ಇಂದಿನ ದಿನಮಾನದಲ್ಲಿ ಮಹಿಳೆ ಇಲ್ಲದ ಮನೆ ಇಲ್ಲ ಕಚೇರಿಯೂ ಇಲ್ಲ ಎನ್ನುವಂತಾಗಿದೆ ಎಂದರು.

 

ಪೌರ ಕಾರ್ಮಿಕರು ನಮಗಾಗಿ ಪ್ರತಿ ದಿನ ನಗರವನ್ನು ಶುಚಿಗೂಳಿಸುವ ಕಾರ್ಯವನ್ನು ಮುಂಜಾನೆಯಿಂದಲೇ ಮಾಡುತ್ತಾರೆ. ಇದರಲ್ಲಿ ಪುರುಷರಷ್ಟೇ ಸಮಾನವಾಗಿ ಮಹಿಳೆಯರು ಸಹಾ ಕೆಲಸವನ್ನು ಮಾಡುತ್ತಾರೆ, ಇದರಲ್ಲಿ ಕಸಗೂಡಿಸುವುದು, ಕಸವನ್ನು ತೆಗೆದುಕೊಂಡು ಹೋಗುವುದು, ಬೀದಿಯನ್ನು ಸ್ವಚ್ಚವಾಗಿ ಇಡುವುದು ಸೇರಿದಂತೆ ಇತರೆ ಕೆಲಸವನ್ನು ಮಾಡುತ್ತಾರೆ ಇವರ ಕೆಲಸವನ್ನು ಬೇರೆಯವರು ಮಾಡುವುದಿಲ್ಲ ಇವರೇ ಮಾಡುತ್ತಾರೆ ಇಂತಹರಿಗೆ ನಾವು ಗೌರವವನ್ನು ನೀಡಬೇಕಿದೆ ಅವರ ಕಾರ್ಯವನ್ನು ಶ್ಲಾಘಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್. ಸುರೇಶ್ ಸಿದ್ದಾಪುರ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಂತಮ್ಮ, ಜಗದಾಂಬ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬಸಮ್ಮ, ಕವನ, ಸಿಂಧೂ, ರೂಪ ರುದ್ರಮ್ಮ, ಶಾರದಮ್ಮ, ವೀಣಾ, ಕಾಂಚನ, ಚಂದ್ರಿಕಾ ಗೀತಾ, ಮಂಜುಳಮ್ಮ ಭಾಗವಹಿಸಿದ್ದರು.

suddionenews

Recent Posts

ಹುಬ್ಬಳ್ಳಿಯಲ್ಲಿ ಕಣ್ಣೀರುಡುತ್ತಾ ಜೈನ ಮುನಿ ಸರ್ಕಾರಕ್ಕೆ ಹೇಳಿದ್ದೇನು..?

ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…

9 hours ago

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…

10 hours ago

ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ : ಎನ್.ಎಸ್.ಮಂಜುನಾಥ

  ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…

11 hours ago

ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…

11 hours ago

ಚಿತ್ರದುರ್ಗ : ಮಾರ್ಚ್ 18 ರಿಂದ 21 ರವರೆಗೆ ಕಣಿವೆಮಾರಮ್ಮನ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago

ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ತುರುವನೂರಿನ ವಿರಾಟ್ ಆಂಜನೇಯ ಸ್ವಾಮಿ ರೇಖಾಚಿತ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago