ಚಿತ್ರದುರ್ಗದಲ್ಲಿ ಹೂವು ಬೆಳಗಾರರ ಪ್ರತಿಭಟನೆ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.17) :  ತೋಟದಲ್ಲಿ ಬೆಳೆಯುತ್ತಿರುವ ಹೂವಿನ ಬೆಳೆಗೆ ರೋಗ ಆವರಿಸಿದ್ದು ಇದನ್ನು ತಡೆಯಲು ಮಾಡಿದ ಹಲವಾರು ಕ್ರಮಗಳು ಸಹಾ ಸಹಕಾರ ಮಾಡಿಲ್ಲ ಇದನ್ನು ಪ್ರತಿಭಟಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಹೂವನ್ನು ಹಾಕಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೆಳೆಗಾರರು ಪ್ರತಿಭಟನೆಯನ್ನು ನಡೆಸಿದರು.

ತಾಲ್ಲೂಕಿನಲ್ಲಿ ಸಾವಿರಾರು ಕುಟುಂಬಗಳು ಹೂವನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಸುಮಾರು 4 ವರ್ಷದಿಂದ ಹೂವಿಗೆ ನುಸಿ ರೋಗದ ಬಾದೆಯು ಹೆಚ್ಚಾಗಿದ್ದು, ಯಾವುದೇ ಔಷಧಿ ಸಿಂಪಡಿಸಿದರೂ ನುಸಿ ರೋಗ ಹತೋಟಿಗೆ ಬರುತ್ತಿಲ್ಲ. ಅನೇಕ ಅಂಗಡಿಗಳಲ್ಲಿ ಬಯೋ ಕಂಪನಿ ಔಷಧಿಯನ್ನು ಮಾರಾಟ ಮಾಡುತ್ತಿದ್ದಾರೆ. ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ ರವರಿಗೆ ಸಾಕಷ್ಟು ಬಾರಿ ಗಮನಕ್ಕೆ ಬಂದಿದ್ದರೂ ಸಹ ಒಬ್ಬರ ಮೇಲೆ ಒಬ್ಬರು ಹೇಳಿಕೊಂಡು ಈ ಕಳಪೆ ಔಷಧಿ ಅಂಗಡಿಗಳಲ್ಲಿ ಎಗ್ಗಿಲ್ಲದೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಹೂವಿನ ಕೃಷಿಯನ್ನು ಒಂದು ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಿದ್ದು, ಅಲ್ಪಸ್ವಲ್ಪ ಅಚ್ಚುಕಟ್ಟು ಜಮೀನಿನಲ್ಲಿ ಹೂವಿನ ಕೃಷಿಯನ್ನು ಮಾಡುತ್ತಿದ್ದು, ದಿನನಿತ್ಯ ಮನೆ ಖರ್ಚಿಗೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೂಗಳನ್ನು ಬೆಳೆಯುತ್ತಿದ್ದು ಈ ಐದಾರು ವರ್ಷಗಳಿಂದ ನುಸಿಹುಳು ಹೆಚ್ಚಾಗಿದ್ದು, ಹೂಗಳನ್ನು ತಿಂದು ಹಾಕುತ್ತಿದ್ದು ತೋಟಗಾರಿಕೆ ಇಲಾಖೆಯವರಿಗೂ ಹಾಗೂ ಕೃಷಿಇಲಾಖೆಯವರಿಗೂ ಮನವಿ ಮಾಡಿದ್ದರೂ ಸಹ ರೈತರ ತೋಟಕ್ಕೆ ಬಂದು ಯಾವುದೇ ರೀತಿ ರೈತರಿಗೆ ಸಲಹೆ ನೀಡಿರುವುದಿಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ಕೃಷಿ ಇಲಾಖೆ ಇದೆಯೋ ಇಲ್ಲವೆಂಬುದು ರೈತರಿಗೆ ಗೊತ್ತಾಗಬೇಕು. ನುಸಿಹುಳು ರೈತರ ಬದುಕನ್ನು ನುಂಗಿಹಾಕುತ್ತಿದೆ. ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ ಬಾಬು, ತಾಲ್ಲೂಕು ಅಧ್ಯಕ್ಷ ಧನಂಜಯ, ಮುಖಂಡರಾದ ಭೂತಯ್ಯ, ಮಂಜಪ್ಪ ಶಿವನಕೆರೆ, ಸಿ.ನಾಗರಾಜು ಮುದ್ದಾಪುರ, ಎಸ್.ಟಿ.ಚಂದ್ರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಕ್ಲಹಳ್ಳಿ ರವಿಕುಮಾರ್, ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ ಎಂ.ಬಿ.ತಿಪ್ಪೇಸ್ವಾಮಿ ಕಾಂತರಾಜು, ಮೂರ್ತಿ, ಮಹಂತಣ್ಣ, ಶಾಂತಣ್ಣ, ಮಲ್ಲಿಕಾರ್ಜನ ನಾಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

Recent Posts

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

6 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

12 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

16 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

19 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

25 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

38 minutes ago