Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾನಪದ ಸಂಗೀತ ಕರ್ನಾಟಕದ ಶ್ರೀಮಂತ ಕಲೆ : ದಳವಾಯಿ ಅಭಿಮತ

---Advertisement---

 

ಸುದ್ದಿಒನ್, ಚಿತ್ರದುರ್ಗ : ಜನರು ಸ್ವತಃ ಹಾಡು ಕಟ್ಟಿ ಬಾಯಿಂದ ಬಾಯಿಗೆ ಹರಡುತ್ತಾ ಪ್ರಸಿದ್ದಿಯಾದ ಜಾನಪದ ಗೀತೆಗಳು ನಮ್ಮ ಕರ್ನಾಟಕದ ಶ್ರೀಮಂತ ಕಲೆಗಳಲ್ಲಿ ಒಂದಾಗಿದೆ ಎಂದು ಮಲ್ಲೂರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎ.ದಳವಾಯಿ ಹೇಳಿದರು.

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಲೂರ ಹಳ್ಳಿಯ  ಶಿವಕುಮಾರ್ ಟಿ ತಂಡದ ವತಿಯಿಂದ ಹಮ್ಮಿಕೊಂಡಿದ್ದ ಜಾನಪದ ಸಂಗೀತ ಕಾರ್ಯಕ್ರಮವನ್ನು ಕೀ ಬೋರ್ಡ್ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಮ್ಮ ಸಂಸ್ಕೃತಿ ಆಚಾರಗಳಿಗೆ ಅನುಗುಣವಾಗಿ ಪ್ರತಿ ಸಂದರ್ಭಕ್ಕೂ ಹಾಡು ಕಟ್ಟಿ ಮೆರುಗನ್ನು ನೀಡಿರುವ ಮಹಾನ್ ಕಲಾವಿದರನ್ನು ಸ್ಮರಿಸಿ ಜಾನಪದ ಗೀತೆಗಳ ಸಂಗೀತ ನಿನಾದಗಳನ್ನು,ಸಾಹಿತ್ಯಗಳನ್ನು  ಅಳಿಯದಂತೆ ನಾವು ಉಳಿಸಬೇಕಿದೆ ಎಂದು ಹೇಳಿದರು.

ಕಲಾ ತಂಡದ ನಾಯಕ ಶಿವಕುಮಾರ್ ಟಿ. ಮಾತನಾಡಿ ಸತತವಾಗಿ 10 ವರ್ಷಗಳಿಂದ ಕಲಾವಿದನಾಗಿ ಕಲಾ ಸೇವೆಯನ್ನು ಮಾಡಲು ನನಗೆ ಮುಖ್ಯವಾದ ಪ್ರೇರೇಪಣೆ ನೀಡಿದ್ದು ನನ್ನ ಗುರುಗಳಾದ ಡಿ. ರಾಜಣ್ಣ ಇವರ ಸೂಕ್ತ ಮಾರ್ಗದರ್ಶನದಿಂದ ಇಂದು ನಾನು ವಿಷ್ಣು ಸಾಂಸ್ಕೃತಿಕ ಕಲಾ ಸಂಘವನ್ನು ಕಟ್ಟಿಕೊಂಡು ಕಲಾ ಸೇವೆಯನ್ನು ಮಾಡಲು ನೆರವಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಎಸ್.ಟಿ ಇವರ ಅನುಮತಿಯಿಂದಾಗಿ ಇಂದು ಜಾನಪದ ಸಂಗೀತ ಕಾರ್ಯಕ್ರಮವನ್ನು ಮಾಡುವ ಸೌಭಾಗ್ಯ ನಮ್ಮ ಕಲಾ ತಂಡಕ್ಕೆ ಲಭಿಸಿದೆ,ಇದೆ ತರ ನಮ್ಮ ತಂಡದಿಂದ ಕಲಾ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು  ಜನರ  ಪ್ರೋತ್ಸಾಹ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯ ಶಿಕ್ಷಕ ವೆಂಕಟೇಶ್ ಹೆಚ್.ಡಿ ಇವರು ಮಾತನಾಡಿ, ಚಲನ ಚಿತ್ರ ಗೀತೆಗಳ ಮಧ್ಯೆ ಜನಪದ ಗೀತೆಗಳನ್ನು ಹಾಡುವ ಪರಿಪಾಟಲು ಕಡಿಮೆಯಾಗುತ್ತಿದೆ, ಜನಪದ ಗೀತೆಗಳ ಸಾಹಿತ್ಯ ಹಾಗೂ ಅವುಗಳ ಮಹತ್ವ ಪ್ರತಿಯೊಬ್ಬ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಸಾಂದರ್ಭಿಕ ಹಾಡುಗಳಾಗಿವೆ.ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಹಾಡುವ ಕಲೆಯನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಕಲಾವಿದರಾಗಿ ಹೊರ ಹೊಮ್ಮುವ ಅವಕಾಶಗಳಿವೆ ಎಂದು ತಿಳಿಸಿದರು.

ಕಲಾವಿದ ರಾಜಣ್ಣ ಮಾತನಾಡಿ ಕಲೆ ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ ಆದರೆ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ, ಯಾರಿಗೆ ನಿರಂತರ ಬದ್ಧತೆ ಹಾಗೂ ಕಲಿಯುವ ಹಂಬಲ ಹೊಂದಿ ಅದರಂತೆ ಸತತ ಪ್ರಯತ್ನಗಳನ್ನು ಮಾಡುವರೋ ಅವರು ನಿಜವಾಗಿ ಉತ್ತಮ ಕಲಾವಿದರಗುತ್ತಾರೆ, ಆದ್ದರಿಂದ ಕಲೆಗೆ ಪ್ರೋತ್ಸಾಹ ನೀಡುವ ಮನಸ್ಸುಳ್ಳ ವ್ಯಕ್ತಿಗಳ ಕೊರತೆಯಿದೆ. ಇದರ ಪರಿಣಾಮ ಕಲಾವಿದರು ಸೃಷ್ಟಿ
ಯಾಗುವ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಬಹುಮುಖ ಪ್ರತಿಭೆಯ ಟಿ.ಶಿವಕುಮಾರ್ ಬಹಳ ವರ್ಷಗಳಿಂದ ಕಲಾವಿದನಾಗಿ ತಂಡವನ್ನು ಕಟ್ಟಿಕೊಂಡು ರಾಜ್ಯಾದ್ಯಂತ ಕಲಾ ಸೇವೆಯನ್ನು ಮಾಡುತ್ತಾ ಸಾಗುತ್ತಿರುವ ಉದಯೋನ್ಮುಖ ಪ್ರತಿಭೆ ಎಂದು ಗಾಯಕ ಶಿಕ್ಷಕರಾದ ಕೆ.ಟಿ.ನಾಗಭೂಷಣ್ ಹೇಳಿದರು.

ಸಂಗೀತ ಕಾರ್ಯಕ್ರಮದಲ್ಲಿ ಕಲಾವಿದ ಗಾಯಕರಾದ ಶಿವಕುಮಾರ್ಟಿ ,ಪ್ರಿಯಾಂಕ, ರಾಜಣ್ಣ,ತಿಪ್ಪೇಸ್ವಾಮಿ, ನಾಗಭೂಷಣ್, ನೀಲಪ್ಪ ತೂಲಹಳ್ಳಿ,ಇವರು ವಿವಿಧ ಜಾನಪದ ಗೀತೆಗಳನ್ನು ಹಾಡುವುದರ ಮೂಲಕ ಪ್ರೇಕ್ಷಕರಿಗೆ ಮನರಂಜನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷೆ ಮಂಜುಳಾ ಬಸವರಾಜ್, ಎಸ್ ಡಿ ಎಂ ಸಿ ಅಧ್ಯಕ್ಷ ಜಯಣ್ಣ, ಕಲಾ ತಂಡದ ನಾಯಕ ಶಿವಕುಮಾರ್ ಟಿ, ರಿದಂ ಪ್ಯಾಡ್ ವಾದಕ ಎಂ ವಿ ಬದ್ರಿ, ಕೀ ಬೋರ್ಡ್ ವಾದಕ ರಾಜಣ್ಣ,ಗಾಯಕ ಪವನ್ ತಳಕು ,ಶಿಕ್ಷಕರಾದ  ವೀರಭದ್ರಪ್ಪ ಡಿ.ಕೆ,ರಂಜಿತಾ,ಮಹಾಂತೇಶ್, ಸೌಮ್ಯ , ಓಬಕ್ಕ,ಪ್ರಸನ್ನ ಕುಮಾರ್, ಬಡ ಮ್ಯಾಕಲಯ್ಯ, ಶಾಲಾ ವಿದ್ಯಾರ್ಥಿಗಳು,ಊರಿನ ಗ್ರಾಮಸ್ಥರು ಹಾಗೂ ಮತ್ತಿತರು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment