Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ದಿನಗಳಲ್ಲಿ ಅನ್ನ – ನೀರಿಗೂ ಹಾಹಾಕಾರ : ಕೋಡಿಮಠದ ಶ್ರೀಗಳ ಭವಿಷ್ಯ

---Advertisement---

ಮಂಡ್ಯ: ಕೋಡಿಮಠದ ಶ್ರೀಗಳು ಭವಿಷ್ಯ ನುಡಿಯುತ್ತಾರೆ ಅಂದ್ರೆ ಎಲ್ಲರ ಚಿತ್ತ ಆ ಕಡೆಗೆ ಇರುತ್ತದೆ. ಇದೀಗ ನಾಡಿನ ಭವಿಷ್ಯ ನುಡಿದಿದ್ದು ಮುಂದಿನ ದಿನಗಳಲ್ಲಿ ಅನ್ನ – ನೀರಿಗೂ ಹಾಹಾಕಾರ ಶುರುವಾಗಲಿದೆ ಎಂದಿದ್ದಾರೆ. ಹವಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರೀ ಏರುಪೇರಾಗಲಿದೆ. ಈ ಹವಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಯಾಗಲಿದೆ. ಅಪಮೃತ್ಯುಗಳ ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯವನ್ನು ನುಡಿದಿದ್ದಾರೆ.

ಖುಷಿಯ ವಿಚಾರ ಅಂದ್ರೆ ಕರ್ನಾಟಕಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂಬ ಸಮಾಧಾನಕರ ಮಾತನ್ನ ಹೇಳಿದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೂ ಗುರು ಸ್ಥಾನದಲ್ಲಿದ್ದು, ಸರಿ ತಪ್ಪುಗಳನ್ನು ತಿದ್ದಿ ಬುದ್ದಿ ಸನ್ಮಾರ್ಗದಲ್ಲಿ ನಡೆಸಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ದೈವಾರಾಧನೆಗಳು ಹೆಚ್ಚಿದ ಪರಿಣಾಮ ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿರಲಿದೆ. ರಾಜ್ಯದ ಜನರು ದೈವಾರಾಧನೆಯ ಮೂಲಕ ಸಮೃದ್ಧಿ ಜೀವನ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

2026ರಲ್ಲಿ ಸಂಭವಿಸಬಹುದಾದಂತ ದುರಂತಗಳ ಬಗ್ಗೆ ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇದು ಹಲವರ ಆತಂಕವನ್ನು ಹೆಚ್ಚಿಸಿದ್ದರೆ, ಕರ್ನಾಟಕಕ್ಕೆ ಯಾವುದೇ ತೊಂದರೆ ಇಲ್ಲ ಎಂಬುದರ ಬಗ್ಗೆ ಸಮಾಧಾನಕರವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...