ಚಿತ್ರದುರ್ಗ : ನ್ಯಾಯಬೆಲೆ ಅಂಗಡಿಗಳ ತಪಾಸಣೆ

1 Min Read

 

ಚಿತ್ರದುರ್ಗ, (ನ.29) : ನಗರದ ಅನೌಪಚಾರಿಕ ಪಡಿತರ ಪ್ರದೇಶದ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ಸೋಮವಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಭೇಟಿ ನೀಡಿ, ತಪಾಸಣೆ ನಡೆಸಿದರು.

ಚಿತ್ರದುರ್ಗ ನಗರದ ಎಪಿಎಂಸಿ ಸಮೀಪದ ಟಿಎಪಿಸಿಎಂಎಸ್ ನ್ಯಾಯಬೆಲೆ ಅಂಗಡಿ ಹಾಗೂ ಬುರುಜನಹಟ್ಟಿಯ ಡಿವಿಟಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಪರಿಶೀಲನೆ, ನ್ಯಾಯಬೆಲೆ ಅಂಗಡಿಗಳಲ್ಲಿನ ಸ್ವಚ್ಛತೆ, ಪಡಿತರ ವಿತರಣೆಯ ಬಗ್ಗೆ ಪಡಿತರ ಚೀಟಿದಾರರ ಸಂದರ್ಶನ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ  ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಹಾರ ನಿರೀಕ್ಷಕ ವಿ.ತಿಪ್ಪೇಶಪ್ಪ, ಬುರುಜನಹಟ್ಟಿ ಡಿವಿಟಿ ನ್ಯಾಯಬೆಲೆ ಅಂಗಡಿ ಮಾಲೀಕ ಮಂಜಣ್ಣ ಸೇರಿದಂತೆ, ಪಡಿತರ ಚೀಟಿದಾರರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *