Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಯ ವೈಶ್ಯ ಸಮುದಾಯದ ವಧು ವರಾನ್ವೇಷಣೆಗಾಗಿ ಋಣಾನುಬಂಧ ಕಾರ್ಯಕ್ರಮ : ಎಲ್. ಈ. ಶ್ರೀನಿವಾಸ್‍ಬಾಬು

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.16 : ಕಾಲ ಬದಲಾದಂತೆ ವೃತ್ತಿ ಮನಸ್ಸುಗಳು ಬದಲಾಗುತ್ತಿವೆ ಎಂದು ಕರ್ನಾಟಕ ಆರ್ಯವೈಶ್ಯ ಆವೋಪ.ಗಳ ಒಕ್ಕೂಟದ ಕಾರ್ಯದರ್ಶಿ ಹೆಚ್.ಜಿ.ದತ್ತಕುಮಾರ್ ಹೇಳಿದರು.

ಆರ್ಯವೈಶ್ಯ ಸಂಘ ಚಿತ್ರದುರ್ಗ, ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘದಿಂದ ವಾಸವಿ ಮಹಲ್‍ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರ್ಯವೈಶ್ಯ ರಾಜ್ಯ ಮಟ್ಟದ ಉಚಿತ ವಧು-ವರರ ಪರಿಚಯ ಋಣಾನುಬಂಧ ವೇದಿಕೆ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ಪೋಷಕರಿಗೂ ಮಕ್ಕಳು ಪ್ರಾಯಕ್ಕೆ ಬಂದ ಮೇಲೆ ವಿವಾಹ ಮಾಡಿ ದಡ ಸೇರಿಸುವ ಆಸೆ ಇರುತ್ತದೆ. ಅದಕ್ಕಾಗಿ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಯೋಗ ಕೂಡಿ ಬರಬೇಕು. ಹಾಗಾಗಿ ಆರ್ಯವೈಶ್ಯ ಜನಾಂಗಕ್ಕೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಋಣಾನುಬಂಧ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಗಂಡಿನ ಸಂಖ್ಯೆ ಜಾಸ್ತಿಯಿದ್ದು, ಹೆಣ್ಣಿನ ಸಂಖ್ಯೆ ಕಡಿಮೆಯಿದೆ. ವ್ಯಾಪಾರಕ್ಕಾಗಿ ಬಂದ ಆರ್ಯವೈಶ್ಯ ಜನಾಂಗ ಹೆಚ್ಚಾಗಿ ಕಿರಾಣಿ ಅಂಗಡಿಗಳನ್ನು ನಡೆಸುವುದು ವಾಡಿಕೆ. ಬರಗಾಲದಂತ ಸಂದರ್ಭಗಳಲ್ಲಿ ಶೆಟ್ಟರ ಅಂಗಡಿಗಳಲ್ಲಿ ಕಿರಾಣಿ ಸಾಮಾಗ್ರಿಗಳನ್ನು ಸಾಲವಾಗಿ ಕೊಡಲಾಗುತ್ತಿತ್ತು ಎನ್ನುವುದನ್ನು ಸ್ಮರಿಸಿಕೊಂಡರು.

ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಈ.ಶ್ರೀನಿವಾಸ್‍ಬಾಬು ಮಾತನಾಡಿ ಆರ್ಯವೈಶ್ಯ ಜನಾಂಗದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆಯಿದ್ದು, ಗಂಡಿನ ಸಂಖ್ಯೆ ಜಾಸ್ತಿಯಿರುವುದರಿಂದ
ಕನ್ಯೆ ಸಿಗುವುದು ಕಷ್ಟಕರ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಋಣಾನುಬಂಧ ಕಾರ್ಯಕ್ರಮಕ್ಕೆ ಮುಂದಾಗಿದ್ದೇವೆ. ಆರ್ಯವೈಶ್ಯ ಜನಾಂಗ ಇದರ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಬಾಗಲಕೋಟೆ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಎನ್.ಕೋರ ಮಾತನಾಡುತ್ತ ದಾಂಪತ್ಯ ಜೀವನ ಎನ್ನುವುದು ಜನ್ಮ ಜನ್ಮಾಂತರದ ಋಣಾನುಬಂಧವೆಂದು ಹಿರಿಯರು ಹೇಳುತ್ತಾರೆ. ಯುವಕ-ಯುವತಿಯರು ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಇದೊಂದು ಅವಕಾಶ. ಋಣಾನುಬಂಧ ಅತ್ಯುತ್ತಮ ವೇದಿಕೆ ಎಂದು ಹೇಳಿದರು.

ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭೆ ಮಾಜಿ ಅಧ್ಯಕ್ಷ ಸಿ.ಎಸ್.ಶಿವಕುಮಾರ್ ಮಾತನಾಡಿ ಆರ್ಯವೈಶ್ಯ ಸಂಘ ಒಳ್ಳೆ ಹೆಜ್ಜೆಯನ್ನಿಟ್ಟಿದೆ. ಇಂತಹ ಪುಣ್ಯದ ಕೆಲಸಕ್ಕೆ ಕೆಲವರು ಕಾಳೆಯುವ ಕೆಲಸ ಮಾಡುತ್ತಾರೆ. ಅದಕ್ಕೆ ಬದಲಾಗಿ ಜನಾಂಗದೊಂದಿಗೆ ಸಹಕರಿಸಲಿ ಎಂದು ಸಲಹೆ ನೀಡಿದರು.

ಆ.ವೋ.ಪ. ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ಅಧ್ಯಕ್ಷತೆ ವಹಿಸಿದ್ದರು.
ಆ.ವೋ.ಪ. ಮಾಜಿ ಅಧ್ಯಕ್ಷ ಎ.ರಾಧಾಕೃಷ್ಣಶೆಟ್ಟಿ, ಆರ್ಯವೈಶ್ಯ ಸಂಘದ ಕಾರ್ಯದರ್ಶಿ ಎಸ್.ನಾಗರಾಜ್, ಆ.ವೋ.ಪ. ಕಾರ್ಯದರ್ಶಿ ಡಿ.ಆರ್.ತಿಪ್ಪೇಸ್ವಾಮಿ, ಆ.ವೋ.ಪ. ಉಪಾಧ್ಯಕ್ಷ ಡಾ.ರಾಮಲಿಂಗಶೆಟ್ಟಿ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗಂಡ ಹೆಂಡತಿ ಎಷ್ಟೇ ಜಗಳ ಮಾಡಿದರೂ ಮರುದಿನ ಏನೂ ನಡೆದಿಲ್ಲ ಎಂದು ನಗುನಗುತ್ತಾ ಸಂಸಾರದ ನೌಕೆ ಸಾಗಿಸುವಂತವರು.

ಈ ರಾಶಿಯ ಗಂಡ ಹೆಂಡತಿ ಎಷ್ಟೇ ಜಗಳ ಮಾಡಿದರೂ ಮರುದಿನ ಏನೂ ನಡೆದಿಲ್ಲ ಎಂದು ನಗುನಗುತ್ತಾ ಸಂಸಾರದ ನೌಕೆ ಸಾಗಿಸುವಂತವರು. ಬುಧವಾರ- ರಾಶಿ ಭವಿಷ್ಯ ಜೂನ್-26,2024 ಸೂರ್ಯೋದಯ: 05:48, ಸೂರ್ಯಾಸ್ತ : 06:49 ಶಾಲಿವಾಹನ

ಡೇವಿಡ್ ವಾರ್ನರ್ ವಿದಾಯಕ್ಕೆ ರಿಕಿ ಪಾಂಟಿಂಗ್ ಭಾವುಕ..!

ಟಿ20 ವಿಶ್ವಕಪ್ ನಲ್ಲಿ ಕಪ್ ಗೆಲ್ಲುವಲ್ಲಿ ಆಸ್ಟ್ರೇಲಿಯಾ ವಿಫಲವಾಗಿದೆ. ಈ ನೋವಿನಲ್ಲಿ ಇರುವಾಗಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಟಗಾರ, ಲೆಜೆಂಡರಿ ಕ್ರಿಕೆಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್

ಕುರಿಗಾಹಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ಬದುಕು ಸುಲಭವಲ್ಲ. ಸಾಕಷ್ಟು ಕಷ್ಟಪಡುತ್ತಾರೆ. ಅವರಿಗೆ ಆದಂತ ಜೀವನ ಸೆಕ್ಯುರಿಟಿಗಳು ಇಲ್ಲ. ಎಲ್ಲೆಲ್ಲೋ ಕುರಿಗಳನ್ನು ಮೇಯಿಸಲು ಹೋದಾಗ ಜೀವ ರಕ್ಷಣೆಗೆ ಏನು ಇಲ್ಲ. ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ

error: Content is protected !!