Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.08 : ತಾಲ್ಲೂಕಿನ ತುರುವನೂರು ಹೋಬಳಿಯಲ್ಲಿ ಅಲ್ಪ ಪ್ರಮಾಣದಲ್ಲಿ ಕಡ್ಲೆ ಬಿತ್ತನೆ ಮಾಡಿದ್ದು, ಈ ಬೆಳೆಗೆ ಸದ್ಯ ಕಾಯಿ ಕೊರಕ ಹುಳುವಿನ ಬಾಧೆ ಕಾಣಿಸಿಕೊಂಡಿದೆ.

ಹಾನಿಯ ಸ್ವರೂಪ : ಮರಿಗಳಾದ ತಕ್ಷಣ ಹಸಿರು ಭಾಗವನ್ನೆಲ್ಲಾ ತಿಂದು, ಎಲೆಗಳನ್ನು ಅಸ್ಥಿಪಂಜರದಂತಾಗಿಸುವುದರಿಂದ ಎಲೆ ಒಣಗಿ ಉದುರುತ್ತದೆ.ಅರಳಿದ ಹೂಗಳನ್ನು,ಬೀಜ ಕೋಶಗಳನ್ನು, ಕೊಂಬೆಗಳನ್ನು ತಿನ್ನುತ್ತಾ ಬೆಳೆಯುತ್ತವೆ. ಬೆಳೆದು ದೊಡ್ಡದಾದ ಹುಳುವು ಕಾಯಿಯಲ್ಲಿನ ಬೀಜಗಳನ್ನು ತಿಂದು ದೇಹದ ಅರ್ಧ ಭಾಗ ಒಳಗಡೆ, ಉಳಿದರ್ಧ ಭಾಗವು ಹೊರಗಡೆ ಇರುತ್ತದೆ. ಆದ್ದರಿಂದ ಇದಕ್ಕೆ ಔಷಧಿ ಸಿಂಪರಣೆ ಮಾಡುವ ಮೂಲಕ ಹುಳುವನ್ನು ನಿಯಂತ್ರಣಕ್ಕೆ ತರಬಹುದು.

ಇನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪಾಲುದಾರಿಕೆಯಲ್ಲಿ ವಿಮಾ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಇದರಲ್ಲಿ 18 ಹಿಂಗಾರು ಮತ್ತು 6 ಬೇಸಿಗೆ ಬೆಳೆಗಳು ಒಳಗೊಳ್ಳುತ್ತವೆ. ಇವುಗಳನ್ನು ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು, ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಇತರೇ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಳವಡಿಸಲಾಗಿದೆ.ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಹತ್ತಿರದ ವಾಣಿಜ್ಯ ಅಥವಾ ಸಹಕಾರಿ ಬ್ಯಾಂಕ್ ನ್ನು ಸಂಪರ್ಕಿಸಬಹುದು.

ಚಿತ್ರದುರ್ಗ ಜಿಲ್ಲೆಯಲ್ಲಿ ಕಡಲೆ (ಮಳೆಯಾಶ್ರಿತ), ಮುಸುಕಿನ ಜೋಳ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ),ಭತ್ತ(ನೀರಾವರಿ),ಗೋಧಿ(ನೀರಾವರಿ) ಬೆಳೆಗಳು ಒಳಗೊಳ್ಳುತ್ತವೆ.

ಅರ್ಜಿಯನ್ನು ಸಲ್ಲಿಸಲು ಈ ತಿಂಗಳ ಅಂದರೆ, ಡಿಸೆಂಬರ್ 15, ಕೊನೆಯ ದಿನವಾಗಿರುತ್ತದೆ. ಹಾಗೆಯೇ, ತುರುವನೂರು ಹೋಬಳಿಯಲ್ಲಿ ರೈತರಿಗೆ ಸಹಾಯಧನ ರೂಪದಲ್ಲಿ ತುಂತುರು ನೀರಾವರಿ ಘಟಕಗಳನ್ನು ವಿತರಿಸಲಾಗುತ್ತಿದೆ. ಒಂದು ಎಕರೆ ಒಳಗಿನ ರೈತರು 2,496 ರೂಪಾಯಿ ಹಾಗೂ ಒಂದು ಎಕರೆ ಮೇಲ್ಪಟ್ಟ ರೈತರು 4,139 ರೂಪಾಯಿ ಹಣ ಪಾವತಿಸಿ ಘಟಕ (Spryncler)ಗಳನ್ನು ಪಡೆಯಬಹುದು ಎಂದು ತುರುವನೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ನಾಗರಾಜ್ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment