Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾತೃಭಾಷೆಯನ್ನು ಮರೆತರೆ ತಾಯಿಯನ್ನೇ ಮರೆತಂತೆ : ದೊಡ್ಡಣ್ಣ

---Advertisement---

ಚಿತ್ರದುರ್ಗ, ಏಪ್ರಿಲ್. 01 : ಮಾತೃಭಾಷೆಯನ್ನು ಮರೆತರೆ ತಾಯಿಯನ್ನೇ ಮರೆತಂತೆ ಎಂದು ಚಲನಚಿತ್ರ ನಟ ದೊಡ್ಡಣ್ಣ ಅಭಿಪ್ರಾಯ ಪಟ್ಟರು.

ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ ಮಾರ್ಚ್ 25 ಮತ್ತು 26 ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಕಾನೂನು ಹಬ್ಬ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯ ಮಹತ್ವ ಮತ್ತು ಕನ್ನಡ ಭಾಷೆಯ ಬಳಕೆ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರಲ್ಲದೇ ಪೌರಾಣಿಕ, ಮಹಾಭಾರತ ಹಾಗೂ ಮಂಕು ತಿಮ್ಮನ ಕಗ್ಗಗಳ ವಿಷಯಗಳನ್ನು ತಿಳಿಸಿ ಕೊಟ್ಟರು.

ಸರಸ್ವತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಎಚ್. ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಫಾತ್ಯರಾಜನ್ ಹಾಗೂ ಕಾರ್ಯದರ್ಶಿ ಶ್ರೀಮತಿ ಡಿ.ಕೆ. ಶೀಲಾ ಹಾಗೂ ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ಎಂ.ಎಸ್. ಸುಧಾದೇವಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕ ಹಾಗೂ ಐಕ್ಯೂಎಸಿ ಕೋ ಆರ್ಡಿನೇಟರ್ ಡಾ. ಎನ್.ಡಿ. ಗೌಡ, ವಿದ್ಯಾರ್ಥಿ ಕಾನೂನು ವೇದಿಕೆ ಗೌರವಾ ಧ್ಯಕ್ಷ ಎಲ್. ಶ್ರೀಶೈಲಾ, ಸಹಾಯಕ ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿ ಕಾನೂನು ವೇದಿಕೆಯ ಅಧ್ಯಕ್ಷ ಡಾ. ಎಸ್. ರವಿ, ಕಾರ್ಯದರ್ಶಿ ಸಿ. ವೆಂಕಣ್ಣ ವೇದಿಕೆಯ ಮೇಲೆ ಉಪಸ್ಥಿತ ರಿದ್ದರು.

ಕಾನೂನು ಹಬ್ಬದಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಂಗೀತ, ನೃತ್ಯ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ…. ಹೀಗೆ ಹತ್ತು ಹಲವು ರೀತಿಯ ಸ್ಪರ್ಧೆಗಳನ್ನು ಏರ್ಪ ಡಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಕೊನೆಯ ದಿನದ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಪ್ರಾರ್ಥನೆಯನ್ನು ವಿಭಿನ್ನ ರೀತಿಯಲ್ಲಿ ವೀಣವಾದನ ದೊಂದಿಗೆ ಕು|| ಭೂಮಿಕಾ ಜಿ.ಆರ್., ನೆರವೇರಿಸಿದರು. ಕು|| ಹೀನ ಕೌಸರ್. ಎಂ.ಎಸ್., ಸ್ವಾಗತಿಸಿದರು. ಎಸ್. ಉದಯ್ ಪ್ರಾಣೇಶ್ ಶರ್ಮ. ವಂದಿ ಸಿದರು, ಕು|| ಬಿ.ಸಿ. ಮೇಘನಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...