Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೋವಾಗಿದ್ದರೆ ಕ್ಷಮೆ ಇರಲಿ : ಹೊಡೆದಾಕಬೇಕು ಎಂಬ ವಿಚಾರಕ್ಕೆ ಸಿದ್ದರಾಮಯ್ಯಗೆ ಕ್ಷಮೆ ಕೇಳಿದ ಅಶ್ವತ್ಥ್ ನಾರಾಯಣ್..!

Facebook
Twitter
Telegram
WhatsApp

ಬೆಂಗಳೂರು: ಮಂಡ್ಯದ ಕಾರ್ಯಕ್ರಮದಲ್ಲಿ ಮಾತನಾಡುವಾಗ ಸಚಿವ ಅಶ್ವತ್ಥ್ ನಾರಾಯಣ್ ಟಿಪ್ಪು ಸುಲ್ತಾನ್ ವಿಚಾರ ಮಾತನಾಡಿದ್ದರು. ಈ ವೇಳೆ ಟಿಪ್ಪು ಹೊಡೆದಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದಾಕಬೇಕು ಎಂದಿದ್ದರು. ಈ ವಿಚಾರಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು. ವಿಷಯ ದೊಡ್ಡದಾಗುವ ಮೊದಲೇ ಅಶ್ವತ್ಥ್ ನಾರಾಯಣ್ ಕ್ಷಮೆ ಕೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಜನರ ಬೆಂಬಲವನ್ನು ಪಡೆಯಬೇಕು, ಕಾಂಗ್ರೆಸ್ ಅನ್ನು ಸೋಲಿಸಬೇಕು ಎಂಬುದು ಸ್ಪಷ್ಟ. ನಾವೀಗ ಪ್ರಜಾಪ್ರಭುತ್ವದಲ್ಲಿ ಇದ್ದೀವಿ. ಯುದ್ಧದ ಕಾಲದಲ್ಲಿ ಅಲ್ಲ ಎಂದಿದ್ದಾರೆ. ನನ್ನ ಮಾತಿನ ಹಿಂದೆ ಯಾವುದೇ ದುರುದ್ಧೇಶವಿಲ್ಲ. ಚುನಾವಣೆಯನ್ನು ಗೆಲ್ಲಬೇಕು ಎಂಬುದರ ಅರ್ಥದಲ್ಲಿ ಹೇಳಿದ್ದು. ಕಾಂಗ್ರೆಸ್ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂಬ ಉದ್ದೇಶದಿಂದ ಹೇಳಿದ್ದು.

ವೈಯಕ್ತಿಕವಾಗಿ ನನಗೆ ಯಾವ ವ್ಯತ್ಯಾಸವಿಲ್ಲ. ಅವರಿಗೆ ನೋವಾಗಿದ್ದರೆ ಕ್ಷಮೆ ಇರಲಿ. ಇದನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಅವರು ಒಬ್ಬ ಮುಖ್ಯಮಂತ್ರಿಯನ್ನು ನಾಯಿಮರಿ ಅಂತೆಲ್ಲಾ ಕರೆದಿದ್ದಾರೆ. ನಮ್ಮ ಪ್ರಧಾನಿಯನ್ನು ನರಹಂತಕ ಅಂತ ಕರೆದಿದ್ದಾರೆ. ಹೊಡೆದಾಡಿ ಬಡಿದಾಡಿ ಗೆಲ್ಲುವುದಲ್ಲ. ಮತಗಳ ಮೂಲಕ ಗೆದ್ದಿದ್ದೇನೆ. ಆ ಕಾಲದಲ್ಲಿ ಯುದ್ಧದ ಮೂಲಕ ಗೆದ್ದರು ಈ ಕಾಲದಲ್ಲಿ ಚುನಾವಣೆ ಮೂಲಕ ನಾವೂ ಅವರನ್ನು ಸೋಲಿಸಬೇಕು ಎಂದು ಹೇಳಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!