Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲಯಾಳಂನ ಹೇಮಾ ವರದಿ ರೀತಿಯಲ್ಲಿಯೇ ಸ್ಯಾಂಡಲ್ ವುಡ್ ನಲ್ಲೂ ಒಂದು ಸಮಿತಿ ರಚಿಸಿ : ಶೃತಿ ಹರಿಹರನ್

---Advertisement---

 

 

ಬೆಂಗಳೂರು: ಮಲಯಾಳಂ ಇಂಡಸ್ಟ್ರಿಯಲ್ಲಿಯೇ ಹೇಮಾ ಸಮಿತಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ನಟಿಯರು ಎದುರಿಸುತಚತಿರುವ ಲೈಂಗಿಕ ಕಿರುಕುಳ ಹಾಗೂ ಶೋಷಣೆಗಳ ಬಗ್ಗೆ ಈ ವರದಿಯಲ್ಲಿ ಉಲ್ಲೇಖವಿದೆ. ಈ ವರದಿಯೂ 2019ರಲ್ಲಿಯೇ ಸರ್ಕಾರದ ಕೈ ಸೇರಿತ್ತು. ಆದರೆ ಈಗ ಒಂದೊಂದೇ ವಿಚಾರಗಳು ಬಹಿರಂಗವಾಗುತ್ತಿವೆ. ಈ ಸಂಬಂಧ ಇದೀಗ ನಟಿ ಶೃತಿ ಹರಿಹರನ್ ಮಾತನಾಡಿ, ಕನ್ನಡ ಚಿತ್ರರಂಗದಲ್ಲೂ ಇಂಥದ್ದೊಂದು ಸಮಿತಿ ರಚಿಸಲಿ ಎಂದಿದ್ದಾರೆ.

ನನಗೆ ಹೇಮಾ ಸಮಿತಿಯ ವರದಿ ಬಗ್ಗೆ ತುಂಬಾನೇ ಗೌರವ ಇದೆ. ಇಷ್ಟು ದಿನಗಳಿಂದ ಈ ಬಗ್ಗೆ ನಾವು ಇದನ್ನು ಮುಚ್ಚು ಮರೆಯಲ್ಲಿ ಮಾತನಾಡುತ್ತಿದ್ದೆವು. ಸೆಕ್ಷುವಲ್ ಫೇವರ್ ಅತಿಯಾಗಿದೆ ಎಂದು ಹೇಳುತ್ತಿದ್ದೆವು. ಈ ವಿಚಾರವನ್ನು ಆಪ್ತಬಳಗದಲ್ಲಿ ಕೆಲವರು ಜೋಕ್ ಕೂಡ ಮಾಡುತ್ತಿದ್ದರು. ಆದರೆ ಈ ವುಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದು ಹೆಮ್ಮೆಯ ವಿಚಾರವೇ ಸರಿ.

ಸಿನಿಮಾ ಕಲೆಗೆ ಸಂಬಂಧಿಸಿದ್ದು. ಅದರೊಳಗೆ ಇರುವ ಕೆಲ ಒಂದು ವಿಚಾರಗಳನ್ನು ಸ್ವಚ್ಚ ಮಾಡಲು ಇದು ಸರಿಯಾದ ಸಮಯ. ನಮ್ಮ ಮನೆಯನ್ನು ನಾವೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಮಂತಾ ಅವರು ಮಾತನಾಡುವಾಗ ತೆಲುಗು ಚಿತ್ರರಂಗದಲ್ಲೂ ಇಂಥದ್ದೊಂದು ಸಮಿತಿಯ ಅಗತ್ಯವಿದೆ ಎಂದು ಹೇಳಿದ್ದರು. ಹಾಗೇ ಕನ್ನಡದಲ್ಲಿಯೂ ಇಂಥ ಸಮಿತಿಗಳು ರಚನೆ ಆಗಬೇಕು ಎಂದಿದ್ದಾರೆ.

ನಟಿ ಶೃತಿ ಹರಿಹರನ್ ಈ ಮೊದಲು ಮೀಟೂ ಕೇಸ್ ಮೂಲಕ ಸಾಕಷ್ಟು ವಿರೋಧ ಅನುಭವಿಸಿದ್ದರು. ಅರ್ಜುನ್ ಸರ್ಜಾ ಅವರ ವಿರುದ್ಧ ಮೀಟೂ ಕೇಸ್ ದಾಖಲಿಸಿದ್ದರು. ಅದಾದ ಬಳಿಕ ಸಾಕಷ್ಟು ನಟಿಯರು ಮೀಟೂ ಕೇಸ್ ಬಗ್ಗೆ ಮಾತನಾಡಿದ್ದರು. ಶೃತಿ ಹರಿಹರನ್ ಈಗಲೂ ಅವರದ್ದೇ ಸ್ಟ್ಯಾಂಡ್ ನಲ್ಲಿ ನಿಂತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment