Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳ ಅಧ್ಯಯನ ಸಮಿತಿ ರಚಿಸಿ : ಸುದೀಪ್,‌ಚೇತನ್ ಸೇರಿ ಹಲವರಿಂದ ಪತ್ರ..!

---Advertisement---

ಬೆಂಗಳೂರು: ಹೇಮಾ ವರದಿ ಇಡೀ ಮಲಯಾಳಂ ಚಿತ್ರರಂಗವನ್ನೇ‌ ನಡುಗಿಸಿದೆ. ಸಮಿತಿಯಲ್ಲಿದ್ದವರೆಲ್ಲ ಒಬ್ಬೊಬ್ಬರೆ ರಾಜೀನಾಮೆ ನೀಡುವಂತೆ ಮಾಡುತ್ತಿದೆ. ದೊಡ್ಡ ದೊಡ್ಡ ತಲೆಗಳ ತಲೆದಂಡವಾಗಿದೆ. ಇದೀಗ ಆ ರೀತಿಯ ಸಮಿತೊಯೊಂದರ ಬೇಡಿಕೆ ಸ್ಯಾಂಡಲ್ ವುಡ್ ನಲ್ಲೂ ಹೆಚ್ಚಾಗಿದೆ. ಈ ಸಂಬಂಧ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಕೂಡ ಬರೆದಿದ್ದಾರೆ.

ಕನ್ನಡ ಚಿತ್ರರಂಗದ ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. FIRE ಅಂದ್ರೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿ ನಟ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಇದ್ದಾರೆ. ಇದೀಗ ಸಮಿತಿ ರಚನೆಗೆ ಈ ಸಂಸ್ಥೆ ಒತ್ತಾಯಿಸಿದೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ ಮನವಿ ಮಾಡಿದೆ. ಈ ಅರ್ಜಿಗೆ ಫೈರ್‌ ಸಂಸ್ಥೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟಿ ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ. ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ವಿನಯ್ ರಾಜ್‌ಕುಮಾರ್, ಸುದೀಪ್​ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕಿದ್ದಾರೆ.

ಇನ್ನಿ ಫೈರ್ ಸಂಸ್ಥೆ ಪತ್ರದ ಮೂಲಕ ಮನವಿ‌ ಮಾಡಿರುವುದೇನೆಂದರೆ, ಕನ್ನಡ ಚಲನಚಿತ್ರೋದ್ಯಮದಲ್ಲೂ ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದಾರೆ. ಇದರ ಕುರಿತು ಅಧ್ಯಯನ ನಡೆಸಬೇಕು. ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ಡಿಮ್ಯಾಂಡ್ ಇಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment