Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಕಸಾಪ ಘಟಕಗಳ ರಚನೆ : ರಾಮಲಿಂಗಶೆಟ್ಟಿ

---Advertisement---

ಸುದ್ದಿಒನ್, ಚಿತ್ರದುರ್ಗ, (ಜು.02) :  ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಗ್ರಾಮೀಣ ಪ್ರದೇಶದಲ್ಲಿಯೂ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷ ರಾಮಲಿಂಗಶೆಟ್ಟಿ ಹೇಳಿದ್ದಾರೆ.

ಭಾನುವಾರ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಗ್ರಾಮದಲ್ಲಿ ಏರ್ಪಡಿಸಿದ್ದ ಕವನ ಸಂಕಲನ ಬಿಡುಗಡೆ ಮತ್ತು ಹೋಬಳಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಸಾಪ ಇದೀಗ ಹೋಬಳಿ ಘಟಕಗಳನ್ನು ಸ್ಥಾಪಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈಗಾಗಲೇ ಭರಮಸಾಗರ ಮತ್ತು ತುರುವನೂರು ಹೋಬಳಿ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ.

ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಘಟಕಗಳನ್ನು ರಚಿಸಲಾಗುವುದು.  ಸಿರಿಗೆರೆಯ ಯುವ ಲೇಖಕ ಟಿ.ಆರ್.ಅವಿನಾಶ್ ತತ್ವ ಸಾರುವ ಪೈರು ಎಂಬ ಕವನ ಸಂಕಲನ ಬಿಡುಗಡೆಯಾಗಿದೆ. ಹಳ್ಳಿಗಳಲ್ಲಿ ಕನ್ನಡದ ಬಗ್ಗೆ ಒಲವು ಹೊಂದಿರುವ ಯುವಕರು ಹಾಗೂ ಹಿರಿಯರು ದೊಡ್ಡ ಪ್ರಮಾಣದಲ್ಲಿದ್ದಾರೆ. ಇವುರುಗಳನ್ನು ಗುರುತಿಸಿ ಸೂಕ್ತವಾದ ಅವಕಾಶಗಳನ್ನು ಒದಗಿಸಲಾಗುವುದು ಎಂದರು.

ನಿವೃತ್ತ ಶಿಕ್ಷಕ ರೇವಣಸಿದ್ದಪ್ಪ ಮಾತನಾಡಿ, ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ಪ್ರತಿ ಹೋಬಳಿ ಮತ್ತು ಹಳ್ಳಿಗಳಲ್ಲಿ ಅಸ್ತಿತ್ವ ಹೊಂದಿದೆ. ಘಟಕಗಳಲ್ಲಿ ಜವಾಬ್ದಾರಿ ಹೊಂದಿರುವವರು ಕೇವಲ ನಾಮಕಾವಸ್ತೆಗೆ ಹುದ್ದೆ ಹೊಂದಬಾರದು. ತಿಂಗಳಿಗೆ ಕನಿಷ್ಟ ಒಂದು ಕಾರ್ಯಕ್ರಮವನ್ನಾಗಿ ಆಯೋಜಿಸಬೇಕು. ಕಲೆ,ಸಾಹಿತ್ಯ, ಸಂಸ್ಕøತಿಯ ಬಗ್ಗೆ ಜನರಲ್ಲಿ ಆಸಕ್ತಿ ಉಂಟು ಮಾಡಬೇಕು. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹೆಚ್ಚು ಸಂಖ್ಯೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹೆಗ್ಗೆರೆ ಗ್ರಾಮದ ಟಿ.ಆರ್.ಅವಿನಾಶ್ ರಚಿಸಿರುವ ತತ್ವ ಸಾರುವ ಪೈರು ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ತಾಲ್ಲೂಕು ಅಧ್ಯಕ್ಷರಾದ ರಾಮಲಿಂಗಶೆಟ್ಟಿಯವರಿಗೆ ತುರುವನೂರು ಹೋಬಳಿಯ ನೂತನ ಅಧ್ಯಕ್ಷರಾದ ಎ.ಬಸಣ್ಣನವರಿಗೆ ಪರಿಷತ್ತಿನ ಬಾವುಟ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಸಾಪ ಪದಾಧಿಕಾರಿಗಳಾದ ವೆಂಕಟೇಶ್, ಎಂ.ವಿಶ್ವನಾಥ್, ತಿಪ್ಪೇಸ್ವಾಮಿ ಮತ್ತಿತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...