Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಕಸಾಪ ಘಟಕಗಳ ರಚನೆ : ರಾಮಲಿಂಗಶೆಟ್ಟಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಜು.02) :  ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಗ್ರಾಮೀಣ ಪ್ರದೇಶದಲ್ಲಿಯೂ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷ ರಾಮಲಿಂಗಶೆಟ್ಟಿ ಹೇಳಿದ್ದಾರೆ.

ಭಾನುವಾರ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಗ್ರಾಮದಲ್ಲಿ ಏರ್ಪಡಿಸಿದ್ದ ಕವನ ಸಂಕಲನ ಬಿಡುಗಡೆ ಮತ್ತು ಹೋಬಳಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಸಾಪ ಇದೀಗ ಹೋಬಳಿ ಘಟಕಗಳನ್ನು ಸ್ಥಾಪಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿಯೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈಗಾಗಲೇ ಭರಮಸಾಗರ ಮತ್ತು ತುರುವನೂರು ಹೋಬಳಿ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ.

ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಘಟಕಗಳನ್ನು ರಚಿಸಲಾಗುವುದು.  ಸಿರಿಗೆರೆಯ ಯುವ ಲೇಖಕ ಟಿ.ಆರ್.ಅವಿನಾಶ್ ತತ್ವ ಸಾರುವ ಪೈರು ಎಂಬ ಕವನ ಸಂಕಲನ ಬಿಡುಗಡೆಯಾಗಿದೆ. ಹಳ್ಳಿಗಳಲ್ಲಿ ಕನ್ನಡದ ಬಗ್ಗೆ ಒಲವು ಹೊಂದಿರುವ ಯುವಕರು ಹಾಗೂ ಹಿರಿಯರು ದೊಡ್ಡ ಪ್ರಮಾಣದಲ್ಲಿದ್ದಾರೆ. ಇವುರುಗಳನ್ನು ಗುರುತಿಸಿ ಸೂಕ್ತವಾದ ಅವಕಾಶಗಳನ್ನು ಒದಗಿಸಲಾಗುವುದು ಎಂದರು.

ನಿವೃತ್ತ ಶಿಕ್ಷಕ ರೇವಣಸಿದ್ದಪ್ಪ ಮಾತನಾಡಿ, ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ಪ್ರತಿ ಹೋಬಳಿ ಮತ್ತು ಹಳ್ಳಿಗಳಲ್ಲಿ ಅಸ್ತಿತ್ವ ಹೊಂದಿದೆ. ಘಟಕಗಳಲ್ಲಿ ಜವಾಬ್ದಾರಿ ಹೊಂದಿರುವವರು ಕೇವಲ ನಾಮಕಾವಸ್ತೆಗೆ ಹುದ್ದೆ ಹೊಂದಬಾರದು. ತಿಂಗಳಿಗೆ ಕನಿಷ್ಟ ಒಂದು ಕಾರ್ಯಕ್ರಮವನ್ನಾಗಿ ಆಯೋಜಿಸಬೇಕು. ಕಲೆ,ಸಾಹಿತ್ಯ, ಸಂಸ್ಕøತಿಯ ಬಗ್ಗೆ ಜನರಲ್ಲಿ ಆಸಕ್ತಿ ಉಂಟು ಮಾಡಬೇಕು. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹೆಚ್ಚು ಸಂಖ್ಯೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹೆಗ್ಗೆರೆ ಗ್ರಾಮದ ಟಿ.ಆರ್.ಅವಿನಾಶ್ ರಚಿಸಿರುವ ತತ್ವ ಸಾರುವ ಪೈರು ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ತಾಲ್ಲೂಕು ಅಧ್ಯಕ್ಷರಾದ ರಾಮಲಿಂಗಶೆಟ್ಟಿಯವರಿಗೆ ತುರುವನೂರು ಹೋಬಳಿಯ ನೂತನ ಅಧ್ಯಕ್ಷರಾದ ಎ.ಬಸಣ್ಣನವರಿಗೆ ಪರಿಷತ್ತಿನ ಬಾವುಟ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಸಾಪ ಪದಾಧಿಕಾರಿಗಳಾದ ವೆಂಕಟೇಶ್, ಎಂ.ವಿಶ್ವನಾಥ್, ತಿಪ್ಪೇಸ್ವಾಮಿ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

error: Content is protected !!