ಹುಬ್ಬಳ್ಳಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಜನರ ಬಳಿಗೆ ತಲುಪುವ ಕೆಲಸವೂ ಜೋರಾಗಿ ಆಗುತ್ತೆ. ಮೂರು ಪಕ್ಷಗಳು ಒಂದೊಂದು ಯಾತ್ರೆ ಮಾಡಿಕೊಂಡು ಜನರ ನೋವು ಸಂಕಷ್ಟವನ್ನು ಕೇಳುತ್ತಿದೆ. ಜೆಡಿಎಸ್ ನಿಂದಾನು ಪಂಚರತ್ನ ಯಾತ್ರೆ ಸಾಗುತ್ತಿದೆ. ಹೀಗಾಗಿ ಕುಮಾರಸ್ವಾಮಿ ಅವರು ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗುತ್ತಿಲ್ಲ.
ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಪಂಚರತ್ನ ಯಾತ್ರೆಗೆ ಹೋದಲೆಲ್ಲಾ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಜನವರಿ 3ರಿಂದ ಬೀದರ್ ನಿಂದ ಯಾತ್ರೆ ಆರಂಭವಾಗಲಿದೆ. 2023 ಫೆಬ್ರವರಿಯಲ್ಲಿ ಬೆಳಗಾವಿ ಭಾಗದಲ್ಲಿ ಯಾತ್ರೆ ಆರಂಭ ಮಾಡಲಾಗುತ್ತದೆ. ಹೀಗಾಗಿ ಈ ಬಾರಿಯ ಚಳಿಗಾಲದ ಅಧಿವೇಸದನಕ್ಕೆ ನಾನು ಹೋಗುವುದಿಲ್ಲ. ಆದರೆ ನಮ್ಮ ಅನುಪಸ್ಥಿತಿಯಲ್ಲಿ ಬಂಡೆಪ್ಪ ಕಾಶೆಂಪೂರ್ ಸಮಸ್ಯೆ ಬಗ್ಗೆ ಚರ್ಚಿಸುತ್ತಾರೆ ಎಂದಿದ್ದಾರೆ.
ಇನ್ನು ಬಿಜೆಪಿ ಬಗ್ಗೆ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯದ ಬಗ್ಗೆ ಬಿಜೆಪಿ ಕಿಂಚಿತ್ತೂ ಗಮನ ಹರಿಸಲ್ಲ. ಒಬ್ಬರು ಹೊಡೆದವರಂತೆ ಮಾಡಿದರೆ ಮತ್ತೊಬ್ಬರು ಅತ್ತ ಹಾಗೆ ಮಾಡುತ್ತಾರೆ. ಘೋಷಣೆಗೆ ಮಾತ್ರ ಬಿಜೆಪಿ ಸರ್ಕಾರ ಸೀಮಿತವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…