Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಿಎಂ ಯಡಿಯೂರಪ್ಪ ಮಗ 100 ಕೋಟಿಗೂ ಹೆಚ್ಚಿನ ಒಡೆಯ..!

Facebook
Twitter
Telegram
WhatsApp

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಸದ್ಯ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯಷ್ಟೇ ಹೆಚ್ಚಿನ ಗಮನ ನೀಡಿದ್ದಾರೆ. ಹೀಗಾಗಿಯೇ ಈ ಬಾರಿಯ ಚುನಾವಣೆಯಲ್ಲಿ ಶಿಕಾರಿಪುರವನ್ನು ಮಗ ವಿಜಯೇಂದ್ರ ಅವರಿಗೆ ಬಿಟ್ಟು ಕೊಡಲಾಗಿದೆ. ಇದೀಗ ವಿಜಯೇಂದ್ರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಅದರಲ್ಲಿ ತನ್ನಲ್ಲಿರುವ ಆಸ್ತಿಯ ವಿಚಾರವನ್ನು ತಿಳಿಸಿದ್ದಾರೆ.

ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ  ಒಟ್ಟು 126.18 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆದರೆ, ದಂಪತಿಗೆ ಒಂದೇ ಒಂದು ಸ್ವಂತ ಕಾರು ಇಲ್ಲ. ವಿಜಯೇಂದ್ರ ಅವರು 46.82 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 7.85 ಮೌಲ್ಯದ ಚರಾಸ್ತಿಯ ಒಡತಿಯಾಗಿದ್ದಾರೆ. ಇನ್ನು ಈ ದಂಪತಿ ಬಳಿ ಪ್ರಸ್ತುತ 70.11 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದೆ.

ವಿಜಯೇಂದ್ರ ಒಟ್ಟು 1.75 ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಹೊಂದಿದ್ದಾರೆ. ದಂಪತಿ ಬಳಿ ಒಟ್ಟು 2.29 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳು ಇವೆ. ವಿಜಯೇಂದ್ರ ಅವರ ಬಳಿ 1.34 ಕೆಜಿ ಚಿನ್ನ ಇದ್ದರೆ, ಅವರ ಪತ್ನಿ 1.25 ಕೆಜಿ ಚಿನ್ನಾಭರಣಗಳನ್ನು ಹೊಂದಿದ್ದಾರೆ.

ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಹೊಂದಿದ್ದಾರೆ. ಏಳು ಮನೆಗಳ್ನು ಹೊಂದಿದ್ದಾರೆ. ಇನ್ನು ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ಅಫಿಡವಿಟ್​ನಲ್ಲಿ ಘೋಷಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!