ಆಪಾದನೆಯಿಂದ ಹೊರ ಬಂದು ಹಿಂದೂ ಧರ್ಮದ ಕೆಲಸ ಮಾಡುತ್ತೇನೆ : ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ: ಹಿಂದೂಗಳ ಮೇಲೆ ಆಗುತ್ತಿರುವಂತ ಘಟನೆಗಳ ಬಗ್ಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ. ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರ ಗಮನಕ್ಕೆ ತರುತ್ತೇನೆ. ನಾನು ರಾಜೀನಾಮೆ ಕೊಟ್ಟಿದ ದಿನದಿಂದ ಈ ನಿಮಿಷಕ್ಕೂ ಕೂಡ ಎಲ್ಲಾ ಜಗದ್ಗುರುಗಳು ಬಂದು ಹೋಗಿದ್ದಾರೆ. ಪೇಜಾವರ ಶ್ರೀಗಳು, ಹಿಂದುಳಿದ ಹಾಗೂ ದಲಿತ ಪರ ಮಠಾಧಿಪತಿಗಳು ಬಂದು ಬಂದು ಆಶೀರ್ವಾದ ಮಾಡಿ ಹೋಗುತ್ತಿದ್ದಾರೆ. ಅವರ ಆಶೀರ್ವಾದ ಸಿಗುತ್ತಿರುವುದು ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ. ಅವರ ಅಪೇಕ್ಷೆಯಂತೆ ಈ ಆಪಾದನೆಯಿಂದ ಹೊರ ಬರುತ್ತೇನೆ. ಹಿಂದೂ ಧರ್ಮದ ಮತ್ತು ದೇಶದ ಕೆಲಸವನ್ನು ಇನ್ನು ಹೆಚ್ಚು ಜೀವಂತ ಇರುವ ತನಕ ಮಾಡುತ್ತೇನೆ ಎಂದಿದ್ದಾರೆ.

ಹಿಂದೂಗಳ ಹನುಮ ಜಯಂತಿ, ರಾಮನ ಉತ್ಸವ ಇರಬಹುದು ಇದರ ಮೇಲೆ ಆಘಾತಕಾರಿ ಕೃತ್ಯವನ್ನು ನಡೆಸುತ್ತಿರುವವರು ಶಾಂತಿಯಿಂದ ಹೋಗುತ್ತಿರುವ ಹನುಮ ಜಯಂತಿ ಮೇಲೆ ಕಲ್ಲು ಹೊಡೆಯುವುದು ಇವೆಲ್ಲವನ್ನು ನೋಡಿದಾಗ ಎಷ್ಟು ಸಹಿಸಿಕೊಂಡು ಇರಬೇಕು. ಪೇಜಾವರ ಶ್ರೀಗಳು ಹೇಳಿದಂತೆ ಆ ಮಾತು ಈಗಲೂ ಆಘಾತ ತರುತ್ತಿದೆ.

ಒಂದು ಕಡೆ ಹಿಂದೂಗಳು ಮಾತ್ರ ಎಲ್ಲದಕ್ಕೂ ಹೊಂದಿಕೊಂಡು ಹೋಗಬೇಕು. ಇನ್ನೊಂದು ಕಡೆ ಅನ್ಯ ಧರ್ಮೀಯರು ತೊಂದರೆ ಕೊಡಬಾರದು. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಮುಸಲ್ಮಾನ ಬಂಧುಗಳು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲಾ ಒಟ್ಟಾಗಿ ಇರಬೇಕೆಂದು ಜಗದ್ಗುರುಗಳು ಹೇಳಿದ್ದರು ಕೂಡ ಇದಕ್ಕೆ ಮುಸಲ್ಮಾನ ಬಂಧುಗಳು ಮಾಡುತ್ತಿರುವ ಆಕ್ರೋಶದ ನಡೆಗಳು, ಹಿಂಸಾಚಾರಗಳನ್ನು ಅವರು ತಿದ್ದಿಕೊಳ್ಳಬೇಕೆಂದು ನೇರವಾಗಿ ಜಗದ್ಗುರುಗಳು ಅವರ ಮಾತಲ್ಲಿ ಹೇಳಿದ್ದಾರೆ. ಜಗದ್ಗುರುಗಳ ಹೇಳಿದಂತೆ ಮುಸಲ್ಮಾನರು ತಿದ್ದಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

43 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago