Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಡು ಮುಟ್ಟದ ಸೊಪ್ಪಿಲ್ಲ, ಸಿದ್ದು ಕೈಹಿಡಿಯದ ಕ್ಷೇತ್ರವಿಲ್ಲ :  ಎಚ್.ಆಂಜನೇಯ 

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ:ಫೆ.16 : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡು ಕಂಡ ಖ್ಯಾತ ಆರ್ಥಿಕ ತಜ್ಞ ಎಂಬುದನ್ನು ತಾವು ಮಂಡಿಸುತ್ತಿರುವ ಪ್ರತಿ ಬಜೆಟ್‍ಲ್ಲೂ ದೃಢಪಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯಪಟ್ಟಿದ್ದಾರೆ.

ಕುರಿ ಕಾಯುವ ಸಮುದಾಯದ ವ್ಯಕ್ತಿ ಹಣಕಾಸು ಮಂತ್ರಿಯಾದ ಸಂದರ್ಭದಲ್ಲಿ ಅನೇಕ ಟೀಕೆ-ಟಿಪ್ಪಣಿಗಳು ಎದುರುಗೊಂಡಿದ್ದವು. ಆದರೆ, ಎಲ್ಲ ಲೆಕ್ಕಾಚಾರವನ್ನು ಉಲ್ಟಾ ಮಾಡಿ ನಾಡಿನ ಅಭಿವೃದ್ಧಿಗೆ ಪಕ್ಕಾ ಲೆಕ್ಕಾಚಾರದಲ್ಲಿ 15 ಬಜೆಟ್‍ಗಳನ್ನು ಮಂಡಿಸಿ ದೇಶದ ಶ್ರೇಷ್ಠ ಆರ್ಥಿಕ ತಜ್ಞ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಾರಿಯ ಬಜೆಟ್ ಸವಾಲು ಆಗಿತ್ತು. ಒಂದೆಡೆ ಗ್ಯಾರಂಟಿ ಯೋಜನೆಗಳಿಗೆ ಕೋಟ್ಯಂತರ ಹಣ ಹೊಂದಿಸುವುದು, ಮತ್ತೊಂದು ಕಡೆ ವಿವಿಧ ಕ್ಷೇತ್ರಗಳಿಗೆ ಅನುದಾನ ಹಂಚಿಕೆ. ಆದರೆ, ಸಿದ್ದರಾಮಯ್ಯ ಅವರು ಈ ಎಲ್ಲ ಸವಾಲನ್ನು ಸಮರ್ಥವಾಗಿ ಎದುರಿಸಿದ್ದಾರಷ್ಟೇ ಅಲ್ಲದೆ, ಈ ಹಿಂದೆ ಎಲ್ಲ ಹಣಕಾಸು ಮಂತ್ರಿಗಳಷ್ಟೇ ಅಲ್ಲದೇ ತಾವೇ ಮಂಡಿಸಿದ ಬಜೆಟ್‍ಗಿಂತ ಶ್ರೇಷ್ಠ, ಅತ್ಯುತ್ತಮ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ ಎಂದು ಎಚ್.ಆಂಜನೇಯ ಬಣ್ಣಿಸಿದ್ದಾರೆ.

ಆಡು ಮುಟ್ಟದ ಸೊಪ್ಪಿಲ್ಲ; ಸಿದ್ದರಾಮಯ್ಯ ಕೈ ಹಿಡಿಯದ ಕ್ಷೇತ್ರವಿಲ್ಲ ಎಂಬ ರೀತಿ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ ಸಂಘ, ಶಿಕ್ಷಣ, ಆರೋಗ್ಯ, ಹೀಗೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳ ಜತೆಗೆ ಬಡ, ಮಧ್ಯಮ ಜನರಿಗೆ ವರದಾನ ಆಗಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿರುವುದು ಅರ್ಥಶಾಸ್ತ್ರಜ್ಞರೇ ಅಚ್ಚರಿ ಪಡುವಂತದ್ದಾಗಿದೆ.ಡಿಸಿಸಿ ಬ್ಯಾಂಕ್, ಪಿಕಾರ್ಡ್‍ಗಳಲ್ಲಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿರುವುದು ದಿಟ್ಟ ನಡೆ ಆಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಚಿತ್ರದುರ್ಗ ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ಮೆಡಿಕಲ್ ಕಾಲೇಜ್ ಆರಂಭ ಮತ್ತು ಅಭಿವೃದ್ಧಿಗೆ 500 ಕೋಟಿ ರೂಪಾಯಿ ಮೀಸಲಿಟ್ಟಿರುವುದು ನಿಜಕ್ಕೂ ಬಯಲುಸೀಮೆ ಜನರ ಮೇಲೆ ತಮಗೆ ಇರುವ ವಿಶೇಷ ಪ್ರೀತಿಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಇದೊಂದು ದೇಶದಲ್ಲಿಯೇ ಅತ್ಯುತ್ತಮ ಮತ್ತು ಜೀವಪರ ಬಜೆಟ್ ಎನ್ನಬಹುದು ಎಂದು ಎಚ್.ಆಂಜನೇಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!