Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಲಂಬಾಣಿ ಹಟ್ಟಿಗಳಲ್ಲಿ ಹೂಮಳೆ, ಬೈಕ್ ರ‌್ಯಾಲಿ ಮೂಲಕ ಮಾಜಿ ಸಚಿವ ಎಚ್.ಆಂಜನೇಯಗೆ ಅದ್ಧೂರಿ ಸ್ವಾಗತ

---Advertisement---

 

ಹೊಳಲ್ಕೆರೆ, (ಮಾ.31) : ಹೊಳಲ್ಕೆರೆ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗಿಂತ ಮುಂಚೆಯೇ ಕಾಂಗ್ರೆಸ್ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಅಖಾಡಕ್ಕೆ ಇಳಿದಿದ್ದಾರೆ.

ಒಂದು ವಾರದಿಂದ ಕಾಲಿಗೆ ಚಕ್ರಕಟ್ಟಿಕೊಂಡು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಹಳ್ಳಿ-ಹಳ್ಳಿಗೆ ಸಂಚರಿಸುತ್ತಿರುವ ಆಂಜನೇಯ ಅವರಿಗೆ ಶುಕ್ರವಾರ ವಿವಿಧ ತಾಂಡಾಗಳಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಗ್ರಾಮಕ್ಕೆ ಮಾಜಿ ಸಚಿವ ಆಂಜನೇಯ ಆವರು ಆಗಮಿಸುತ್ತಾರೆ ಎಂದು ಸುದ್ದಿ ತಿಳಿದ ಸಾವಿರಾರು ಮಂದಿ, ಅವರ ಸ್ವಾಗತಕ್ಕೆ ಕಾದು ಕುಳಿತಿದ್ದರು. ಊರಿಗೆ ಆಗಮಿಸುತ್ತಿದ್ದಂತೆ ಆಂಜನೇಯ ಅವರನ್ನು ನೂರಾರು ಬೈಕ್ ರ‌್ಯಾಲಿ ಮೂಲಕ ತಾಂಡಾಕ್ಕೆ ಕರೆ ತರಲಾಯಿತು. ಹಟ್ಟಿ ಪ್ರವೇಶಿಸುತ್ತಿದ್ದಂತೆ ಆಂಜನೇಯ ಅವರಿಗೆ ಹೂವಿನ ಮಳೆಯೇ ಸುರಿಸಲಾಯಿತು.

ಆರ್.ಡಿ.ಕಾವಲ್, ಲಂಬಾಣಿಹಟ್ಟಿ, ತುಪ್ಪದಹಳ್ಳಿ ಲಂಬಾಣಿಹಟ್ಟಿ, ಕೆಂಚಪುರ ಲಂಬಾಣಿ ಹಟ್ಟಿ ಸೇರಿ ಅನೇಕ ಊರುಗಳಲ್ಲಿ ಲಂಬಾಣಿ ಸಮುದಾಯದ ನೂರಾರು ಮಹಿಳೆಯರು ಗುಂಪು-ಗುಂಪಾಗಿ ಸಾಂಪ್ರಾದಾಯಿಕ ನೃತ್ಯದ ಮೂಲಕ ಆಂಜನೇಯ ಅವರನ್ನು ಸ್ವಾಗತಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ರಂಗು ನೀಡಿ  ಗಮನಸೆಳೆದರು.

ಪ್ರತಿ ಹಟ್ಟಿ, ತಾಂಡಗಳಲ್ಲಿ ನೂರಾರು ಯುವಕರು, ಮಹಿಳೆಯರು ವಿಶೇಷವಾಗಿ ಸ್ವಾಗತಿಸಿ, ಬೀಳ್ಕೊಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ನೀವು ಮಿನಿಸ್ಟ್ರ್ ಆಗಿದ್ದಾಗ ನಮ್ಮೂರಿಗೆ ಬಹಳ  ಅನುಕೂಲ ಮಾಡಿಕೊಟ್ಟಿದ್ದೀರಾ ಸ್ವಾಮಿ, ನೀವು ನಮ್ಮ ಮೇಲಿಟ್ಟಿರುವ ಪ್ರೀತಿಯನ್ನು ಮರೆಯೋದಿಲ್ಲ. ಕೋಟ್ಯಾಂತರ ರೂಪಾಯಿ ಅನುದಾನ ಕೊಟ್ಟಿದ್ದೀರಾ, ನಮ್ಮ ಮಕ್ಕಳಿಗೆ ಕಾರು, ಬೈಕ್ ಸಹಾಯಧನದಡಿ ಕೊಟ್ಟಿದ್ದಿರಾ, ಹೊಲಕ್ಕೆ ಬೋರ್‌ವೆಲ್ ಕೊರೆಯಿಸಿಕೊಟ್ಟಿದ್ದೀರಾ. ಅದರ ಪರಿಣಾಮ ಇಂದು ಬೆಳೆ ಬೆಳೆದು ಜೀವನ ಕಟ್ಟಿಕೊಂಡಿದ್ದೀವೆ ಸ್ವಾಮಿ. ನಮ್ಮೂರಿನ ರಸ್ತೆಗಳನ್ನು ಸೀಮೆಂಟ್ ರಸ್ತೆ ಮಾಡಿದ್ದೀರಾ, ನಿಮ್ಮ ಋಣ ನಮ್ಮ ಮೇಲೈತೆ ಸ್ವಾಮಿ ಎಂದು ಆಂಜನೇಯ ಅವರ ಅಧಿಕಾರದ ಅವಧಿ ಅಭಿವೃದ್ಧಿ ಕಾರ್ಯವನ್ನು ತಾಂಡಾದ ಜನ ಸ್ಮರಿಸಿದರು.

ಹಟ್ಟಿಗಳಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ಆಂಜನೇಯ, ನಿಮ್ಮೂರಿಗೆ ರಸ್ತೆ,, ನಿಮ್ಮ ಹೊಲಕ್ಕೆ ಕೊಳವೆಬಾವಿ, ಯುವಕರಿಗೆ ಕಾರು, ದುಡಿಯುವ ಕೈಗೆ ಉದ್ಯೋಗ ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಮಾಡಿದ್ದೀನಿ ಎಂಬುದಕ್ಕಿಂತ ಅವೆಲ್ಲವೂ ನಿಮ್ಮ ಹಕ್ಕು, ನಿಮಗೆ ದೊರಕಿಸಿಕೊಡುವುದು ಅಧಿಕಾರಿಗಳ, ಜನಪ್ರತಿನಿಧಿಗಳ ಕರ್ತವ್ಯ. ನಾನೂ ಕೂಡ ನನ್ನ ಕರ್ತವ್ಯ ನಿರ್ವಹಿಸಿದ್ದೇನೆ. ಇದರಲ್ಲಿ ವಿಶೇಷತೆ ಇಲ್ಲ. ಆದರೆ, ನಿಮ್ಮ ಅಭಿಮಾನ, ಪ್ರೀತಿ ಸ್ಮರಣೀಯವಾಗಿದೆ ಎಂದು ಭಾವುಕರಾಗಿ ಮಾತನಾಡಿದರು.

ಮಹಿಳೆಯರು, ಯುವಕರು ವಿಶೇಷವಾಗಿ ನನ್ನನ್ನು ಸ್ವಾಗತಿಸಿದ್ದಾರೆ. ಸಾಂಪ್ರಾದಾಯಿಕ ನೃತ್ಯ, ಬೈಕ್ ರ‌್ಯಾಲಿ ಮಾಡಿದ್ದೀರಾ. ಇದಕ್ಕೆ ಪ್ರತಿಯಾಗಿ ನಾನು ಮುಂದಿನ ದಿನಗಳಲ್ಲಿ ನಿಮ್ಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ತಾಂಡಾ, ಗೊಲ್ಲರಹಟ್ಟಿ ಸೇರಿ ಅನೇಕ ಹಳ್ಳಿಗಳು ಸೌಲಭ್ಯಗಳಿಂದ ವಂಚಿತವಾಗಿದ್ದವು. ನಾನು ಸಮಾಜ ಕಲ್ಯಾಣ ಸಚಿವನಾಗಿದ್ದ ಸಂದರ್ಭ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇನೆ. ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರಿಂದ ಮಂತ್ರಿಯಾಗಿ ಕೆಲಸ ಮಾಡಲು ಸಾಧ್ಯವಾಯಿತು. ಇನ್ಮುಂದೆಯೂ ಹೊಳಲ್ಕೆರೆ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಬದ್ಧನಾಗಿದ್ದೇನೆ ಎಂದು ಹೇಳಿದರು.

ಲಿಂಗಾಯಿತ, ಯಾದವ, ನಾಯಕ, ಲಂಬಾಣಿ, ಕುರುಬ ಹೀಗೆ ಎಲ್ಲ  ವರ್ಗದವರಿಗೆ ಸರ್ಕಾರದಿಂದ ಸಲ್ಲಬೇಕಾದ ಸೌಲಭ್ಯವನ್ನು ಸಚಿವನಾಗಿದ್ದ ಸಂದರ್ಭ ದೊರಕಿಸಿಕೊಡಲು ಶ್ರಮಿಸಿದ್ದೇನೆ. ರಾಜ್ಯದಲ್ಲಿ ಎಲ್ಲ ಸಮುದಾಯದವರಿಗೆ ಸಮುದಾಯ ಭವನ, ಶಿಕ್ಷಣ, ಉದ್ಯೋಗಕ್ಕೆ ಸರ್ಕಾರದಿಂದ ಅನೇಕ ಯೋಜನೆ ಜಾರಿಗೊಳಿಸಿದ್ದು, ಅವುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಚಿಂತನೆ ಇದೆ. ನಿಮ್ಮೆಲ್ಲರ ಸಹಕಾರ ಇದ್ದರೆ ಸಾಧ್ಯವಾಗಲಿದೆ ಎಂದು ತಿಳಿಸಿದರು.

ತಾಂಡಾದ ಅನೇಕ ಹಿರಿಯ ಮುಖಂಡರು ಮಾತನಾಡಿ, ಬಿಜೆಪಿ ಸರ್ಕಾರದ ಭ್ರಷ್ಟಚಾರಕ್ಕೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದೇವೆ. ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಅಡುಗೆ ಎಣ್ಣೆ, ಬೇಳೆ ಕಾಳುಗಳನ್ನು ಖರೀದಿಸಲು ಸಾದ್ಯವಾಗದ ಪರಿಸ್ಥಿತಿಗೆ ಬೆಲೆ ಏರಿಕೆ ಆಗಿದೆ. ಪೆಟ್ರೊಲ್, ಡಿಸೇಲ್ ಬೆಲೆ ದುಪ್ಪಟ್ಟು ಆಗಿದ್ದು, ಪರಿಣಾಮ ಬಸ್ ಪ್ರಯಾಣ ಕೂಡ ದುಬಾರಿ ಆಗಿದೆ. ಇದರಿಂದ ನಮ್ಮಂತಹ ಬಡಜನರು ಈ ಬಿಜೆಪಿ ಸರ್ಕಾರದಲ್ಲಿ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾದೆ ಎಂದು ಹೇಳಿದರು.

ಮುಖಂಡರಾದ ಪುಟ್ಡನಾಯ್ಕ್, ಸುನೀಲ್ ನಾಯ್ಕ್, ಬಸವರಾಜ್ ನಾಯ್ಕ್, ಲಕ್ಷ್ಮಣ್ ನಾಯ್ಕ್, ಸುರೇಶ್ ನಾಯ್ಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...